ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಿಳೆಯೊಬ್ಬರು ಇಲ್ಲಿ ಹೇಗೆ ಆರೈಕೆ ಮಾಡಲಾಗುತ್ತಿದೆ.ಮಹಿಳೆಯರಿಗೆ ಚಿಕಿತ್ಸೆ ಹೇಗೆ ದೊರೆಯುತ್ತಿದೆ ಎಂಬುದನ್ನು ಖುದ್ದಾಗಿ ರೋಗಿಯ ಸಂಬoಧಿಕರೊoದಿಗೆ ಸಂವಾದ ನಡೆಸಿದ ಚೌಧರಿ ಅವರಿಗೆ ಮಹಿಳೆಯರು ಉತ್ತರಿಸಿ ‘ ಇಲ್ಲಿನ ವೈದ್ಯರು ನಮಗೆ ದೇವರಿದ್ದಂತೆ,ಒಳ್ಳೆಯ ಸೇವೆ ಕೊಡುತ್ತಿದ್ದಾರೆ’ ಎಂದು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿದ ನಾಗಲಕ್ಷ್ಮೀ, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಅನುಷ್ಠಾನವಾಗಿರುವ ಕುರಿತು ಆಸ್ಪತ್ರೆಯಲ್ಲಿ ದಾಖಲಾಗುವ ರೋಗಿಗಳು,ಅವರ ಸಂಬAಧಿಕರನ್ನು ಮಾತನಾಡಿಸಿದರೆ ತಿಳಿದು ಬರುತ್ತದೆ.ಮುದ್ದೇಬಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಸೇವೆ ದೊರೆಯುತ್ತಿದ್ದು ಇದನ್ನು ಮುಂದುವರೆಸುವoತೆ ಆಡಳಿತ ವೈದ್ಯಾಧಿಕಾರಿ ಡಾ.ರಂಗನಾಥ ವೈದ್ಯ ಅವರಿಗೆ ಸೂಚಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ನಾಗಲಕ್ಷ್ಮೀ, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಯ ಶವಾಗಾರ ಸ್ಥಳಾಂತರ,ಇಲ್ಲಿನ ಸಿಬ್ಬಂದಿಗೆ ವಸತಿ ಗೃಹಸೌಲಭ್ಯ ಸೇರಿದಂತೆ ಮೂಲಸೌರ್ಯ ಒದಗಿಸುವ ಕುರಿತು ಜಿಲ್ಲಾಮಟ್ಟದ ಸಭೆಯಲ್ಲಿ ಚರ್ಚೆ ನಡೆಸಿ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ಡಾ.ಸತೀಶ ತಿವಾರಿ,ಕರ್ನಾಟಕ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಸರ್ಕಾರಿ ನೌಕರ ಸಂಘದ ಉಪಾಧ್ಯಕ್ಷ ವಿಠ್ಠಲ ಕಿಲಾರಟ್ಟಿ, ಮಹ್ಮದರಫೀಕ ಬಾಗವಾನ ಸೇರಿದಂತೆ ಹಲವರು ಇದ್ದರು.
ಹೆಣ್ಣು ಭ್ರೂಣ ಹತ್ಯೆ ವಾಸನೆ ಬಡಿಯುತ್ತಿದೆ ಎಂದು ಚೌಧರಿ..!:
ಮುದ್ದೇಬಿಹಾಳ ತಾಲ್ಲೂಕಿನಲ್ಲಿ 1000 ಪುರುಷರಿಗೆ 936 ಮಹಿಳೆಯರ ಅನುಪಾತ ಇರುವುದಕ್ಕೆ ತೀವ್ರ ಅಚ್ಚರಿ ವ್ಯಕ್ತಪಡಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ, ಬಾಗಲಕೋಟ ,ಗದಗ ಜಿಲ್ಲೆಯಲ್ಲಿ ಹೆಣ್ಣು-ಗಂಡಿನ ಅನುಪಾತ ಸರಿಯಾಗಿದೆ.ಆದರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಹೆಣ್ಣಿನ ಅನುಪಾತ ಕಡಿಮೆಯಾಗಿರುವುದು ಆರೋಗ್ಯಕರ ಬೆಳವಣಿಗೆಯಲ್ಲ.ಎಲ್ಲೋ ಈ ಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿದೆಯೇ ಎಂಬ ಬಗ್ಗೆ ಆರೋಗ್ಯ ಇಲಾಖೆ ಗಂಭೀರವಾಗಿ ತನಿಖೆ ನಡೆಸಬೇಕು ಎಂದು ತಿಳಿಸಿದರು.







