ನಾಗರಬೆಟ್ಟ : ಜ.5 ರಂದು RE-TALENT EXAM

ನಾಗರಬೆಟ್ಟ : ಜ.5 ರಂದು RE-TALENT EXAM

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ತಾಲ್ಲೂಕಿನ ನಾಗರಬೆಟ್ಟದ ಬೆಟ್ಟದ ಪಕ್ಕದಲ್ಲಿರುವ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಜ.5 ರಂದು ರಿ ಟ್ಯಾಲೆಂಟ್ ಅವಾರ್ಡ್-2025 ಪರೀಕ್ಷೆ ನಡೆಯಲಿದೆ.

ಈ ಕುರಿತು ಡಿಸಿಜಿ ನ್ಯೂಸ್‌ನೊಂದಿಗೆ ಮಾಹಿತಿ ಹಂಚಿಕೊAಡಿರುವ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಅವರು, ಡಿ.22, ರಂದು ಟ್ಯಾಲೆಂಟ್ ಸರ್ಚ್ ಸ್ಕಾಲರಶಿಪ್ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅಂದು 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆ ನಿಗದಿಪಡಿಸಿದ್ದ ಶೇಕಡವಾರು ಅಂಕ ಗಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲಿಲ್ಲ.ಆದರೆ ಸಂಸ್ಥೆಯವರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿ 3555 ವಿದ್ಯಾರ್ಥಿಗಳ ಪೈಕಿ ಮೊದಲ 200 ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳನ್ನು ಮರು ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ.

ಅದರಲ್ಲಿ 80 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆಯಡಿ ಆಯ್ಕೆ ಮಾಡಲಾಗುತ್ತದೆ.ಅದರಲ್ಲಿ ಮೊದಲ 1-20 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷ ಸಂಪೂರ್ಣ ಊಟ, ವಸತಿಯೊಂದಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. 20-40 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದವರೆಗಿನ ಉಚಿತ ಶಿಕ್ಷಣ ನೀಡಲಾಗುತ್ತದೆ(ವಸತಿ,ಊಟಕ್ಕೆ ಶುಲ್ಕ ನೀಡಬೇಕು),40-60 ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 90 ಸಾವಿರ ರೂ.ರಿಯಾಯಿತಿ ನೀಡಲಾಗುತ್ತದೆ. 60-80 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ನೀಡಲು ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಜ.5ರಂದು ಬೆಳಗ್ಗೆ 11 ಗಂಟೆಗೆ ಆಯ್ಕೆಯಾದ 200 ವಿದ್ಯಾರ್ಥಿಗಳನ್ನು ಕರೆಯಿಸಿ ರಿ ಟ್ಯಾಲೆಂಟ್ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಸ್ಥೆಯಿAದ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್ ತಿಳಿಸಿದ್ದಾರೆ.

Latest News

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಲಿ ಎಂಬ ಸದುದ್ಧೇಶದಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಾದ್ಯಾಂತ ಜೂ.1 ರಿಂದ ಸರ್ಕಾರಿ ಶಾಲೆಗಳ ಆರಂಭೋತ್ಸವಕ್ಕೆ ಸೂಚನೆ ನೀಡಿದಂತೆ ತಾಲ್ಲೂಕಿನೆಲ್ಲೆಡೆ ವೈಭವದಿಂದ ಶಾಲೆಗಳನ್ನು ಶಿಕ್ಷಕರು ಆರಂಭಿಸಿದ್ದಾರೆ. ಕೆಲವಡೆ ಮಕ್ಕಳಿಗೆ ಸರ್ಕಾರದಿಂದ ಪೂರೈಕೆಯಾಗಿರುವ ಪಠ್ಯಪುಸ್ತಕಗಳು,ಬಟ್ಟೆ ಕೊಟ್ಟು ಸ್ವಾಗತಿಸಿಕೊಂಡರೆ ಇನ್ನು ಕೆಲವೆಡೆ ಶಾಲಾ ಮಕ್ಕಳನ್ನು ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ಊರಿನ ತುಂಬೆಲ್ಲ ಮೆರವಣಿಗೆ ನಡೆಸಿ