ನಾಗರಬೆಟ್ಟ : ಜ.5 ರಂದು RE-TALENT EXAM

ನಾಗರಬೆಟ್ಟ : ಜ.5 ರಂದು RE-TALENT EXAM

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ತಾಲ್ಲೂಕಿನ ನಾಗರಬೆಟ್ಟದ ಬೆಟ್ಟದ ಪಕ್ಕದಲ್ಲಿರುವ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಜ.5 ರಂದು ರಿ ಟ್ಯಾಲೆಂಟ್ ಅವಾರ್ಡ್-2025 ಪರೀಕ್ಷೆ ನಡೆಯಲಿದೆ.

ಈ ಕುರಿತು ಡಿಸಿಜಿ ನ್ಯೂಸ್‌ನೊಂದಿಗೆ ಮಾಹಿತಿ ಹಂಚಿಕೊAಡಿರುವ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಅವರು, ಡಿ.22, ರಂದು ಟ್ಯಾಲೆಂಟ್ ಸರ್ಚ್ ಸ್ಕಾಲರಶಿಪ್ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅಂದು 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆ ನಿಗದಿಪಡಿಸಿದ್ದ ಶೇಕಡವಾರು ಅಂಕ ಗಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲಿಲ್ಲ.ಆದರೆ ಸಂಸ್ಥೆಯವರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿ 3555 ವಿದ್ಯಾರ್ಥಿಗಳ ಪೈಕಿ ಮೊದಲ 200 ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳನ್ನು ಮರು ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ.

ಅದರಲ್ಲಿ 80 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆಯಡಿ ಆಯ್ಕೆ ಮಾಡಲಾಗುತ್ತದೆ.ಅದರಲ್ಲಿ ಮೊದಲ 1-20 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷ ಸಂಪೂರ್ಣ ಊಟ, ವಸತಿಯೊಂದಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. 20-40 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದವರೆಗಿನ ಉಚಿತ ಶಿಕ್ಷಣ ನೀಡಲಾಗುತ್ತದೆ(ವಸತಿ,ಊಟಕ್ಕೆ ಶುಲ್ಕ ನೀಡಬೇಕು),40-60 ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 90 ಸಾವಿರ ರೂ.ರಿಯಾಯಿತಿ ನೀಡಲಾಗುತ್ತದೆ. 60-80 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ನೀಡಲು ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಜ.5ರಂದು ಬೆಳಗ್ಗೆ 11 ಗಂಟೆಗೆ ಆಯ್ಕೆಯಾದ 200 ವಿದ್ಯಾರ್ಥಿಗಳನ್ನು ಕರೆಯಿಸಿ ರಿ ಟ್ಯಾಲೆಂಟ್ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಸ್ಥೆಯಿAದ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್ ತಿಳಿಸಿದ್ದಾರೆ.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ