ನಾಗರಬೆಟ್ಟ : ಜ.5 ರಂದು RE-TALENT EXAM

ನಾಗರಬೆಟ್ಟ : ಜ.5 ರಂದು RE-TALENT EXAM

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ತಾಲ್ಲೂಕಿನ ನಾಗರಬೆಟ್ಟದ ಬೆಟ್ಟದ ಪಕ್ಕದಲ್ಲಿರುವ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಜ.5 ರಂದು ರಿ ಟ್ಯಾಲೆಂಟ್ ಅವಾರ್ಡ್-2025 ಪರೀಕ್ಷೆ ನಡೆಯಲಿದೆ.

ಈ ಕುರಿತು ಡಿಸಿಜಿ ನ್ಯೂಸ್‌ನೊಂದಿಗೆ ಮಾಹಿತಿ ಹಂಚಿಕೊAಡಿರುವ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಅವರು, ಡಿ.22, ರಂದು ಟ್ಯಾಲೆಂಟ್ ಸರ್ಚ್ ಸ್ಕಾಲರಶಿಪ್ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅಂದು 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆ ನಿಗದಿಪಡಿಸಿದ್ದ ಶೇಕಡವಾರು ಅಂಕ ಗಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲಿಲ್ಲ.ಆದರೆ ಸಂಸ್ಥೆಯವರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿ 3555 ವಿದ್ಯಾರ್ಥಿಗಳ ಪೈಕಿ ಮೊದಲ 200 ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳನ್ನು ಮರು ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ.

ಅದರಲ್ಲಿ 80 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆಯಡಿ ಆಯ್ಕೆ ಮಾಡಲಾಗುತ್ತದೆ.ಅದರಲ್ಲಿ ಮೊದಲ 1-20 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷ ಸಂಪೂರ್ಣ ಊಟ, ವಸತಿಯೊಂದಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. 20-40 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದವರೆಗಿನ ಉಚಿತ ಶಿಕ್ಷಣ ನೀಡಲಾಗುತ್ತದೆ(ವಸತಿ,ಊಟಕ್ಕೆ ಶುಲ್ಕ ನೀಡಬೇಕು),40-60 ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 90 ಸಾವಿರ ರೂ.ರಿಯಾಯಿತಿ ನೀಡಲಾಗುತ್ತದೆ. 60-80 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ನೀಡಲು ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಜ.5ರಂದು ಬೆಳಗ್ಗೆ 11 ಗಂಟೆಗೆ ಆಯ್ಕೆಯಾದ 200 ವಿದ್ಯಾರ್ಥಿಗಳನ್ನು ಕರೆಯಿಸಿ ರಿ ಟ್ಯಾಲೆಂಟ್ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಂಸ್ಥೆಯಿAದ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್ ತಿಳಿಸಿದ್ದಾರೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು