ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು ನಾವು ನಿರೀಕ್ಷಿಸಿದ್ದಕ್ಕಿಂತ ಉತ್ತಮವಾದ ಸಾಧನೆಯನ್ನು ವಿದ್ಯಾರ್ಥಿಗಳು ತೋರಿದ್ದಾರೆ ಎಂದು ತಿಳಿಸಿದ್ದಾರೆ.

ಶೇ.90ಕ್ಕೂ ಅಧಿಕ ಪರ್ಸೆಂಟೈಲ್ ಅಂಕವನ್ನು 60 ವಿದ್ಯಾರ್ಥಿಗಳು ಗಳಿಸಿದ್ದಾರೆ. ಗಾಯತ್ರಿ ಶಿಂಧೆ ಶೇ.98.77, ಮಾನಸಾ ಹಿರೇಮಠ ಶೇ.98.32,ಅಜೀತ ಬೆಳ್ಳುಬ್ಬಿ ಶೇ.98.04,ಭಾಗ್ಯಶ್ರೀ ಬಸರಕೋಡ ಶೇ.97.94,ಮಾನಸಾ ಹುಲ್ಯಾಳ ಶೇ.97.06, ಶರತ್ ಗಬಸಾವಳಗಿ ಶೇ.97.46, ವರ್ಷಾ ಯರಗಟ್ಟಿ ಶೇ.97.46,ಸುಮಿತ ಪತ್ತಾರ ಶೇ.97.23,ಪ್ರತೀಕ್ಷಾ ಕುಂಬಾರ ಶೇ.97.16, ಸ್ಪೂರ್ತಿ ಚೌಡಕಿ ಶೇ.96.83,ಭಾಗ್ಯಾ ಹೊಸಮನಿ ಶೇ.96.81,ಮೊಹ್ಮದ್‌ಇಬ್ರಾಹಿಂ ವಾಲೀಕಾರ ಶೇ.96.7,ಚಿನ್ಮಯಿ ನೇಗಿನಹಾಳ ಶೇ.96.66,ಸುದರ್ಶನ ಕುಲಕರ್ಣಿ ಶೇ.96.17,ಸಿದ್ಧಾರ್ಥ ಕಡಿ ಶೇ.96.14,ರಾಜೇಶ್ವರಿ ಕೋಲಕಾರ ಶೇ.96.14,ಸಂಪತ ಕಟ್ಟಿಮಠ ಶೇ.95.92,ಗಾಯತ್ರಿ ಪಾಟೀಲ ಶೇ.95.74,ವಿಕಾಸ ಕ್ಷತ್ರಿ ಶೇ.95.6, ಅಪರ್ಣಾ ಲಚ್ಯಾಣ ಶೇ.95.56,ಅಮಸಿದ್ದ ಪೂಜಾರಿ ಶೇ.95.09,ಮಲ್ಲಿಕಾರ್ಜುನ ಗುಬ್ಬೇವಾಡ ಶೇ.95.08, ಪವನ ಹಿರೇಮಠ ಶೇ.95.06, ಅಕ್ಷತಾ ಪೂಜೇರ ಶೇ.95.01 ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು,ಬೋಧಕ,ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ