ಸದನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿಕೆಶಿ ಉತ್ತರ: ಮಾರ್ಚ್ ಅಂತ್ಯಕ್ಕೆ ನಾಗರಬೆಟ್ಟ ಏತನೀರಾವರಿ ಯೋಜನೆ ಪೂರ್ಣ

ಸದನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿಕೆಶಿ ಉತ್ತರ: ಮಾರ್ಚ್ ಅಂತ್ಯಕ್ಕೆ ನಾಗರಬೆಟ್ಟ ಏತನೀರಾವರಿ ಯೋಜನೆ ಪೂರ್ಣ

ಮುದ್ದೇಬಿಹಾಳ : ತಾಲ್ಲೂಕಿನ ಮಹತ್ವಾಕಾಂಕ್ಷೆ ನೀರಾವರಿ ಯೋಜನೆಗಳಲ್ಲಿ ಒಂದಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯ ಎಲ್ಲ ಕೆಲಸಗಳನ್ನು 2026ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದಿರುವ ಚಳಿಗಾಲದ ಅಧಿವೇಶನದಲ್ಲಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಅವರು ಕೇಳಿದ 53ನೇ ಚುಕ್ಕೆ ಗುರುತಿನ ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದ ಪ್ರಶ್ನೆಗೆ ಉತ್ತರಿಸಿರುವ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ ಅವರು, ಮುದ್ದೇಬಿಹಾಳ ತಾಲ್ಲೂಕಿನ 3200 ಹೆಕ್ಟೇರ್ ನೀರಾವರಿ ವಂಚಿತ ಕ್ಷೇತ್ರಕ್ಕೆ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಕೃಷ್ಣಾ ನದಿ ನೀರನ್ನು ಎತ್ತಿ ನೀರಾವರಿಗೊಳಪಡಿಸುವ ನಾಗರಬೆಟ್ಟ ಏತ ನೀರಾವರಿ ಯೋಜನೆ 170.70 ಕೋಟಿ ರೂ.ಅಂದಾಜು ಮೊತ್ತಕ್ಕೆ ಸೆ.12,2017ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು ಯೋಜನೆಯನ್ನು ಮೂರು ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಳ್ಳಲಾಗಿತ್ತದೆ ಎಂದು ತಿಳಿಸಿದ್ದಾರೆ.

ಪ್ಯಾಕೇಜ್-1ರಲ್ಲಿ ಮುಖ್ಯಸ್ಥಾವರ ಮತ್ತು ಎಲೆಕ್ಟೊçÃ(ELECTRO) ಮೆಕ್ಯಾನಿಕಲ್ ಟರ್ನ್ಕೀ(TURN KEY) ಆಧಾರಿತ ಕಾಮಗಾರಿ 49.39 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು ನವೆಂಬರ್ 2025ರ ವರೆಗೆ ಆರ್ಥಿಕ ಪ್ರಗತಿ 48.64 ಕೋಟಿ ರೂ.ಗಳಾಗಿದೆ.ಕಾಮಗಾರಿ ಪೂರ್ಣಗೊಂಡಿದ್ದು ಅ.25,2023ರಂದು ಪ್ರಾಯೋಗಿಕವಾಗಿ ಚಾಲನೆಗೊಳಿಸಲಾಗಿದೆ.ಪ್ರಸ್ತುತ ನಿರ್ವಹಣಾ ಹಂತದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಪ್ಯಾಕೇಜ್-2 ರಲ್ಲಿ 3200 ಹೆಕ್ಟೇರ್‌ಗೆ ನೀರಾವರಿ ಒದಗಿಸುವ ಕಾಲುವೆ ಜಾಲದ ಕಾಮಗಾರಿ ಒಟ್ಟು 54.25ಕಿ.ಮೀ ಪೈಕಿ 50.40 ಕಿ.ಮೀ ಉದ್ದದ ಕಾಲುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಬಾಕಿ ಉಳಿದ 3.85 ಕಿ.ಮೀ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ಯಾಕೇಜ್ ನಂ-3ರಲ್ಲಿ 30.70 ಕಿ.ಮೀ ಉದ್ದ ಅಚ್ಚುಕಟ್ಟು ರಸ್ತೆ ಕಾಮಗಾರಿ ಪೈಕಿ 27.ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಪೂರ್ಣಗೊಂಡಿದ್ದು ಬಾಕಿ ಉಳಿದಿರುವ 3.70 ಕಿ.ಮೀ ಉದ್ದದ ರಸ್ತೆಯ ಪೈಕಿ 2 ಕಿ.ಮೀ ರಸ್ತೆಯ ಜಿ.ಎಸ್.ಬಿ ಕೆಲಸ ಪೂರ್ಣಗೊಂಡಿರುತ್ತದೆ.ಬಾಕಿ ಉಳಿದ 1.70 ಕಿ.ಮೀ ರಸ್ತೆಯನ್ನು ರೈತರ ಮನವೊಲಿಸಿ ಮಾರ್ಚ್ 2026ರೊಳಗಾಗಿ ಪೂರ್ಣಗೊಳಿಸಲು ಕ್ರಮ ಜರುಗಿಸಲಾಗುವುದು ಎಂದು ಸಚಿವರು ವಿಧಾನಸಭೆಯಲ್ಲಿ ಒದಗಿಸಿದ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ. –NEWS BY: HEBBAL PUBLICITY

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ