ಸದನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿಕೆಶಿ ಉತ್ತರ: ಮಾರ್ಚ್ ಅಂತ್ಯಕ್ಕೆ ನಾಗರಬೆಟ್ಟ ಏತನೀರಾವರಿ ಯೋಜನೆ ಪೂರ್ಣ

ಸದನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿಕೆಶಿ ಉತ್ತರ: ಮಾರ್ಚ್ ಅಂತ್ಯಕ್ಕೆ ನಾಗರಬೆಟ್ಟ ಏತನೀರಾವರಿ ಯೋಜನೆ ಪೂರ್ಣ

ಮುದ್ದೇಬಿಹಾಳ : ತಾಲ್ಲೂಕಿನ ಮಹತ್ವಾಕಾಂಕ್ಷೆ ನೀರಾವರಿ ಯೋಜನೆಗಳಲ್ಲಿ ಒಂದಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯ ಎಲ್ಲ ಕೆಲಸಗಳನ್ನು 2026ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದಿರುವ ಚಳಿಗಾಲದ ಅಧಿವೇಶನದಲ್ಲಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಅವರು ಕೇಳಿದ 53ನೇ ಚುಕ್ಕೆ ಗುರುತಿನ ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದ ಪ್ರಶ್ನೆಗೆ ಉತ್ತರಿಸಿರುವ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ ಅವರು, ಮುದ್ದೇಬಿಹಾಳ ತಾಲ್ಲೂಕಿನ 3200 ಹೆಕ್ಟೇರ್ ನೀರಾವರಿ ವಂಚಿತ ಕ್ಷೇತ್ರಕ್ಕೆ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಕೃಷ್ಣಾ ನದಿ ನೀರನ್ನು ಎತ್ತಿ ನೀರಾವರಿಗೊಳಪಡಿಸುವ ನಾಗರಬೆಟ್ಟ ಏತ ನೀರಾವರಿ ಯೋಜನೆ 170.70 ಕೋಟಿ ರೂ.ಅಂದಾಜು ಮೊತ್ತಕ್ಕೆ ಸೆ.12,2017ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು ಯೋಜನೆಯನ್ನು ಮೂರು ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಳ್ಳಲಾಗಿತ್ತದೆ ಎಂದು ತಿಳಿಸಿದ್ದಾರೆ.

ಪ್ಯಾಕೇಜ್-1ರಲ್ಲಿ ಮುಖ್ಯಸ್ಥಾವರ ಮತ್ತು ಎಲೆಕ್ಟೊçÃ(ELECTRO) ಮೆಕ್ಯಾನಿಕಲ್ ಟರ್ನ್ಕೀ(TURN KEY) ಆಧಾರಿತ ಕಾಮಗಾರಿ 49.39 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು ನವೆಂಬರ್ 2025ರ ವರೆಗೆ ಆರ್ಥಿಕ ಪ್ರಗತಿ 48.64 ಕೋಟಿ ರೂ.ಗಳಾಗಿದೆ.ಕಾಮಗಾರಿ ಪೂರ್ಣಗೊಂಡಿದ್ದು ಅ.25,2023ರಂದು ಪ್ರಾಯೋಗಿಕವಾಗಿ ಚಾಲನೆಗೊಳಿಸಲಾಗಿದೆ.ಪ್ರಸ್ತುತ ನಿರ್ವಹಣಾ ಹಂತದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಪ್ಯಾಕೇಜ್-2 ರಲ್ಲಿ 3200 ಹೆಕ್ಟೇರ್‌ಗೆ ನೀರಾವರಿ ಒದಗಿಸುವ ಕಾಲುವೆ ಜಾಲದ ಕಾಮಗಾರಿ ಒಟ್ಟು 54.25ಕಿ.ಮೀ ಪೈಕಿ 50.40 ಕಿ.ಮೀ ಉದ್ದದ ಕಾಲುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಬಾಕಿ ಉಳಿದ 3.85 ಕಿ.ಮೀ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ಯಾಕೇಜ್ ನಂ-3ರಲ್ಲಿ 30.70 ಕಿ.ಮೀ ಉದ್ದ ಅಚ್ಚುಕಟ್ಟು ರಸ್ತೆ ಕಾಮಗಾರಿ ಪೈಕಿ 27.ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಪೂರ್ಣಗೊಂಡಿದ್ದು ಬಾಕಿ ಉಳಿದಿರುವ 3.70 ಕಿ.ಮೀ ಉದ್ದದ ರಸ್ತೆಯ ಪೈಕಿ 2 ಕಿ.ಮೀ ರಸ್ತೆಯ ಜಿ.ಎಸ್.ಬಿ ಕೆಲಸ ಪೂರ್ಣಗೊಂಡಿರುತ್ತದೆ.ಬಾಕಿ ಉಳಿದ 1.70 ಕಿ.ಮೀ ರಸ್ತೆಯನ್ನು ರೈತರ ಮನವೊಲಿಸಿ ಮಾರ್ಚ್ 2026ರೊಳಗಾಗಿ ಪೂರ್ಣಗೊಳಿಸಲು ಕ್ರಮ ಜರುಗಿಸಲಾಗುವುದು ಎಂದು ಸಚಿವರು ವಿಧಾನಸಭೆಯಲ್ಲಿ ಒದಗಿಸಿದ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ. –NEWS BY: HEBBAL PUBLICITY

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ