Nagmohan Dasa Report Omission Corrected: Manjunath Chalavadi

ನಾಗಮೋಹನ್ ದಾಸ ವರದಿ ಲೋಪ ಸರಿಪಡಿಸಿ: ಮಂಜುನಾಥ ಛಲವಾದಿ

ನಾಗಮೋಹನ್ ದಾಸ ವರದಿ ಲೋಪ ಸರಿಪಡಿಸಿ: ಮಂಜುನಾಥ ಛಲವಾದಿ

ಮುದ್ದೇಬಿಹಾಳ : ನ್ಯಾ ನಾಗಮೋಹನ್ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಛಲವಾದಿ (ಹೊಲಯ ) ಸಮುದಾಯಕ್ಕೆ ಅನ್ಯಾಯ ಮಾಡಿದೆ, ಸರಿಯಾದ ದತ್ತಂಶ ಸಂಗ್ರಹಿಸದೆ ಹಿಂದಿನ ವರದಿಯನ್ನೇ ಕಾಫಿ ಪೇಸ್ಟ್ ಮಾಡಲಾಗಿದೆ ಎಂದು ಛಲವಾದಿ ಸಮಾಜದ ರಾಜ್ಯ ಸಮಿತಿ ಸದಸ್ಯ ಮಂಜುನಾಥ್ ಛಲವಾದಿ(ಬಸರಕೋಡ) ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಛಲವಾದಿ ಸಮಾಜಕ್ಕೆ ಸೇರಿದ ಅನೇಕ ಉಪಜಾತಿಗಳನ್ನು ವಿಂಗಡಿಸಿ, ಜನಸಂಖ್ಯೆ ಕಡಿಮೆ ಆಗುವಂತೆ ಮಾಡಿದೆ, ಬಲಗೈ ಸಮುದಾಯದ ಛಲವಾದಿ, ಹೊಲಯ, ಹೊಲರ್, ಪರಯ್ಯ, ಚಾಂಡಲ, ವಿವಿಧ ಉಪಜಾತಿಗಳ್ಳನ್ನು ವಿಂಗಡಿಸಿ ಸಾಮಾಜಿಕ ಅನ್ಯಾಯ ಮಾಡಲಾಗಿದೆ, ಶತಮಾನದಿಂದ ಶೋಷಣೆಗೆ ಒಳಗಾದ ಸಮಾಜವನ್ನು ರಾಜಕೀಯವಾಗಿ ಮುಗಿಸುವ ಕೆಲಸ ಇದಾಗಿದೆ, ವರದಿಯಲ್ಲಿನ ಲೋಪಗಳನ್ನು ಸರಿಪಡಿಸಿ ಜಾರಿ ಮಾಡಬೇಕು ಇಲ್ಲವಾದರೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕ ಕೇಂದ್ರಗಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಆದಿ ಕರ್ನಾಟಕ, ಆದಿ ದ್ರಾವಿಡ ಉಪಜಾತಿಗಳಲ್ಲಿ ಶೇಕಡಾ 85 ಕ್ಕೂ ಹೆಚ್ಚು ಹೊಲೆಯ ಜಾತಿಗೆ ಸೇರಿದ ಜನರಿದ್ದು ಅವರನ್ನು ವಿಂಗಡಣೆ ಮಾಡಿ ಸಾಮಾಜಿಕ ನ್ಯಾಯ ದೊರಕದಂತೆ ಮಾಡಲಾಗಿದೆ, ಛಲವಾದಿ, ಹೊಲಯ ಎರಡನ್ನು ಸೇರಿಸಿದರೆ ಕರ್ನಾಟಕದಲ್ಲಿ ಬಲಗೈ ಸಮುದಾಯದ ಜನಸಂಖ್ಯೆ ಹೆಚ್ಚಾಗಲಿದೆ, ಸಾಮಾಜಿಕ ನ್ಯಾಯದ ಸಲುವಾಗಿ ಬಲಗೈ ಸಮುದಾಯದ ನಿಖರ ಸಂಖ್ಯೆ ನಮೂದಿಸಿ 7% ಒಳ ಮೀಸಲಾತಿ ಕಲ್ಪಿಸಬೇಕು ಎಂದು ಅಗ್ರಹಿಸಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ