Namaz break canceled!

ನಮಾಜ್ ವಿರಾಮ ರದ್ದು!

ನಮಾಜ್ ವಿರಾಮ ರದ್ದು!

ಗುವಾಹಟಿ: ಅಸ್ಸಾಂ ವಿಧಾನಸಭೆಯಲ್ಲಿ ಪ್ರತಿ ಶುಕ್ರವಾರ 2 ತಾಸು ಮುಸ್ಲಿಂ ಶಾಸಕರಿಗೆ ನೀಡುತ್ತಿದ್ದ ‘ಜುಮ್ಮಾ ವಿರಾಮ’ (ನಮಾಜ್ ಬ್ರೇಕ್) ರದ್ದು ಮಾಡಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಮುಸ್ಲಿಂ ಮದುವೆ ಮತ್ತು ವಿಚ್ಛೇದನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕೆಂಬ ಮಸೂದೆ ಅಂಗೀಕಾರ ಮಾಡಿದ ಮರುದಿನವೇ ಈ ನಿರ್ಧಾರ ಹೊರಬಿದಿದೆ ಎಂಬುದು ಗಮನಾರ್ಹ.

ಪ್ರತಿ ಶುಕ್ರವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಸ್ಲಿಂ ಶಾಸಕರು ನಮಾಜ್ ಮಾಡುವುದಕ್ಕೆ ಅನುಕೂಲವಾಗಲಿ ಎಂದು ಸದನವನ್ನು ಮುಂದೂಡುವ ಪದ್ಧತಿ ಅಸ್ಸಾಂ ವಿಧಾನಸಭೆಯಲ್ಲಿ 1937ರಿಂದ ಜಾರಿಯಲ್ಲಿತ್ತು.

ಊಟದ ಬಳಿಕ ಸದನ ಮತ್ತೆ ಆರಂಭವಾಗುತ್ತಿತ್ತು. ಆದರೆ, ಸ್ಪೀಕರ್ ಅವರ ಸಮಿತಿಯು ಸದನದ ನಡಾವಳಿಗೆ ತಿದ್ದುಪಡಿ ತಂದು 87 ವರ್ಷಗಳಿಂದ ಜಾರಿಯಲ್ಲಿದ್ದ ಈ ವಿರಾಮವನ್ನು ತೆಗೆದು ಹಾಕಿದೆ.

ವಾರದ ಬೇರೆ ದಿನಗಳಂದು ನಮಾಜ್ ಬ್ರೇಕ್ ಇರಲಿಲ್ಲ. ಹಾಗೆಯೇ, ಬ್ರಿಟಿಷ್ ಕಾಲದ ಈ ಪಳೆಯುಳಿಕೆಯಂತಹ ಪದ್ದತಿ ಮುಂದುವರೆಯುವ ಅಗತ್ಯವಿರಲಿಲ್ಲ. ಜಾತ್ಯತೀತ ತತ್ವಕ್ಕೆ ಗೌರವ ನೀಡಲು ಈ ಪದ್ಧತಿ ರದ್ದುಪಡಿಸಲಾಗಿದೆ ಎಂದು ಸ್ಪೀಕರ್ ಬಿಸ್ವಜಿತ್ ಡೈಮೇರಿ ಡೋಂಗ್ರಿಯಾ ಹೇಳಿದ್ದಾರೆ.

ಇದನ್ನೂ ಓದಿ: Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಇದನ್ನು ಸ್ವಾಗತಿಸಿದ್ದು, ‘1937ರಲ್ಲಿ ಮುಸ್ಲಿಂ ಲೀಗ್‌ನ ಸಯ್ಯದ್ ಸಾದುಲ್ಲಾ ಈ ಪದ್ಧತಿ ಪರಿಚಯಿಸಿದ್ದರು. ಇದರ ರದ್ದತಿ ಐತಿಹಾಸಿಕ ಎಂದಿದ್ದಾರೆ.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು