ನಾರಾಯಣಪುರ: ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಿಲಾಗುತ್ತಿದೆ (Narayanpur dam)ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ (Sharanabasappagouda darshanapur) ಅವರು ಅಭಿಪ್ರಾಯಪಟ್ಟರು.
Join Our Telegram: https://t.me/dcgkannada
ನಾರಾಯಣಪುರದ ಬಸವಸಾಗರ ಜಲಾಶಯ (Narayanapur dam) ಭರ್ತಿಯಾದ ಹಿನ್ನೆಲೆ ಜಿಲ್ಲೆಯ ಉಸ್ತುವಾರಿ ಸಚಿವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Muddebihal news: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅಪಮಾನ: ಆರೋಪ
ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರು ಎಂಎಲ್ಸಿ ಶರಣಗೌಡ ಭಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರರಾದ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರರಾದ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
