Natimani has revealed the story of sexual assault

ಲೈವ್ ನಲ್ಲಿ ಕಣ್ಣೀರಿಟ್ಟ ನಟಿ.. ಲೈಂಗಿಕ ದೌರ್ಜನ್ಯದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟ ನಟಿಮಣಿ (ವಿಡಿಯೋ ನೋಡಿ)

ಲೈವ್ ನಲ್ಲಿ ಕಣ್ಣೀರಿಟ್ಟ ನಟಿ.. ಲೈಂಗಿಕ ದೌರ್ಜನ್ಯದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟ ನಟಿಮಣಿ (ವಿಡಿಯೋ ನೋಡಿ)

ಹೈದರಾಬಾದ್:‌‌ ಹೇಮಾ ಸಮಿತಿ ವರದಿ (Hema Committee Report) ಬಂದ ನಂತರ ಮಾಲಿವುಡ್‌(Molly wood) ಸಿನಿಮಾರಂಗದಲ್ಲಿ ಒಂದೊಂದೇ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬರುತ್ತಿರುವುದು ಗಮನಾರ್ಹ ಸಂಗತಿ.

ಹೌದು, ಇದೀಗ ಆಂಧ್ರ ಪ್ರದೇಶದ ರಾಜಕಾರಣಿಯೊಬ್ಬರ ಮೇಲೆ ನಟಿಯೊಬ್ಬರು ಮಾಡಿರುವ ಲೈಂಗಿಕ, ಮಾನಸಿಕ ಹಿಂಸೆಯ ಆರೋಪ ಆಂದ್ರಪ್ರದೇಶದ ರಾಜಕೀಯ ಹಾಗೂ ಸಿನಿರಂಗದಲ್ಲೂ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕಾದಂಬರಿ ಜೇತ್ವಾನಿ (Actress Kadambari Jetwani) ಬಣ್ಣದ ಲೋಕ್ಕೆ ಕಾಲಿಡುವ ಮುನ್ನ ಮುಂಬೈನಲ್ಲಿ ಮಾಡೆಲ್‌ ಆಗಿದ್ದರು. 2012ರಲ್ಲಿ ಬಂದ ʼಸಡ್ಡಾ ಅಡ್ಡಾʼ ಸಿನಿಮಾದಲ್ಲಿ ಕಾಣಿಸಿಕೊಂಡ ಬಳಿಕ 2015ರಲ್ಲಿ ಬಂದ ‘ಯೂಜಾ’ ಎನ್ನುವ ತೆಲುಗು ಚಿತ್ರಕ್ಕೆ ನಾಯಕಿಯಾಗಿಯೂ ಆಯ್ಕೆ ಆಗಿದ್ದರು.

ಹೀಗೆ, ಬಣ್ಣದ ಲೋಕದಲ್ಲಿ ತನ್ನ ಮೋಹಕ ಅಂದದಿಂದ ಗಮನ ಸೆಳೆದಿದ್ದ ಕಾದಂಬರಿ ಜೇತ್ವಾನಿ ತೆಲುಗಿನ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಇತ್ತೀಚೆಗೆ ಲೈವ್‌ನಲ್ಲಿ ಮಾತನಾಡುತ್ತಾ ಕಣ್ಣೀರಿಟ್ಟರು.

ಅಲ್ಲದೆ, ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ(Jagan Mohan Reddy ) ಅವರ ವೈಎಸ್‌ಆರ್‌ಸಿಪಿ(YSCRP) ಪಕ್ಷದ ನಾಯಕನೊಬ್ಬನ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪ ಆಂಧ್ರದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.

ವಿಜಯವಾಡದ ಜಿಪಂ ಮಾಜಿ ಅಧ್ಯಕ್ಷ ಕುಕ್ಕಲ ನಾಗೇಶ್ವರ ರಾವ್ ಅವರ ಮಗ ವೈಎಸ್‌ಆರ್‌ಸಿಪಿ ನಾಯಕ ಕುಕ್ಕಲ ವಿದ್ಯಾಸಾಗರ್‌ (Kukkala Vidya Sagar) ಎಂಬಾತ ಪ್ರತಿದಿನ ನನಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸುತ್ತಿದ್ದನು. ವಾಟ್ಸಾಪ್ ನಲ್ಲಿ ಕರೆ ಮಾಡಿ ಬೆತ್ತಲೆಯಾಗಿ ನಿಂತು ಸೆಲ್ಫಿ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದನು. ಅಂದಿನ ಆಂಧ್ರ ಸರ್ಕಾರದ ಪ್ರಬಲ ನಾಯಕರು, ಉನ್ನತ ಪೊಲೀಸ್ ಅಧಿಕಾರಿಗಳ ಗ್ಯಾಂಗ್ ಹಣ ಹಾಗೂ ಅಧಿಕಾರವನ್ನು ಬಳಸಿಕೊಂಡು ನನಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆಂಧ್ರ ಸರ್ಕಾರದ ಆದೇಶದ ಮೇರೆಗೆ ಅದೊಂದು ದಿನ ಮುಂಬೈನಲ್ಲಿನ ನನ್ನ ಮನೆಗೆ ಆಂಧ್ರ ಪೊಲೀಸರು ದಾಳಿ ಮಾಡಿದ್ದರು. ನನ್ನನ್ನು ಅಪಹರಿಸಿ, ನನ್ನ ತಂದೆ – ತಾಯಿಯನ್ನು ಜೈಲಿಗಟ್ಟಿದ್ದರು. ಜೈಲಿನಲ್ಲಿ ನೀಡಿದ ಚಿತ್ರಹಿಂಸೆಯಿಂದಾಗಿ ನನ್ನ ತಂದೆಗೆ ಕಿವಿ ಕೇಳಿಸದಂತೆ ಆಯಿತು. ನನ್ನ ತಾಯಿಗೆ ಹೃದಯದ ಸಮಸ್ಯೆಯಾಯಿತು ಎಂದೂ ಆರೋಪಿಸಿದ್ದಾರೆ.

ಆರು ತಿಂಗಳಿಂದ ಯಾರೊಂದಿಗೂ ಮಾತನಾಡಲಿಲ್ಲ. ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಮುಂಬೈನಲ್ಲಿ ನನ್ನನ್ನು ಅಪಹರಿಸಿ ವಿಜಯವಾಡಕ್ಕೆ ಕರೆತರಲಾಯಿತು. ನನ್ನ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನನ್ನ ಪೋಷಕರ ಫೋನ್ ವಶಪಡಿಸಿಕೊಳ್ಳಲಾಗಿದೆ. ಅವರು ನನ್ನ ಸಂಬಂಧಿಕರಿಗೆ ಬೆದರಿಕೆ ಹಾಕಿದರು ಎಂದು ಅವರು ಹೇಳಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ನನ್ನ ಮೇಲೆ ದೂರು ದಾಖಲಿಸಿ ಸುಮಾರು 45 ದಿನಗಳ ಕಾಲ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ. ಈ ಕಾಲದಲ್ಲಿಯೂ ಮಹಿಳೆಗೆ ಈ ರೀತಿಯಾದರೆ ಮಹಿಳೆಯರಿಗೆ ಸ್ವಾತಂತ್ರ್ಯ ಎಲ್ಲಿದೆ ಎಂದು ಕಣ್ಣೀರಿಟ್ಟಿದ್ದಾರೆ.

ವಿದ್ಯಾ ಸಾಗರ್‌ ಪರಿಚಯವಾದದ್ದು ಹೇಗೆ?

ನನ್ನ ಮೇಲೆ ಸುಳ್ಳ ಆರೋಪ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ನನ್ನನ್ನು ಜೈಲಿಗಟ್ಟಿದ ಈತ ನನ್ನ ಸ್ನೇಹಿತವೆಂದು ಹೇಳಿಕೊಂಡು 2009ರಿಂದ ಪರಿಚಯವಾಗಿದ್ದ. ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಾ, ಒಳ್ಳೆಯದನ್ನು ಬಯಸುತ್ತಾ ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ. ಈತ ನನ್ನ ಜೀವನದಲ್ಲಿ ಹೇಗೆಲ್ಲಾ ಮಾಡುತ್ತಾನೆ ಅಂಥ ನಾನು ಕಲ್ಪನೆಯೂ ಮಾಡಿಕೊಂಡಿರಲಿಲ್ಲ. ಅವನ ಒಳ್ಳೆಯತನದ ಹಿಂದೆ ಒಂದು ಕೆಟ್ಟ ಉದ್ದೇಶವಿತ್ತು ಎಂದು ನಟಿ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಜೈಲಿನಿಂದ ಹೊರಬಂದಿದ್ದೇನೆ. ಅವರು ನಮ್ಮ ಜೀವನಕ್ಕೆ ದೇವರಂತೆ ಬಂದರು ಎಂದು ಅವರು ಚಂದ್ರಬಾಬು ನಾಯ್ಡು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸದ್ಯ ನಟಿಯ ಈ ಆರೋಪ ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಆರೋಪಿ ವಿದ್ಯಾ ಸಾಗರ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು