ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ಮುದ್ದೇಬಿಹಾಳ : ಗೋವಾ ರಾಜ್ಯದಲ್ಲಿ ನಡೆಯುತ್ತಿರುವ ಯೂಥ್ ಗೇಮ್ಸ್ ಇಂಡಿಯಾದಿoದ ರಾಷ್ಟ್ರಮಟ್ಟದ 10 ವರ್ಷದೊಳಗಿನ ಬಾಲಕರಿಗಾಗಿ ಹಮ್ಮಿಕೊಂಡಿದ್ದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಬಸವ ಇಂಟರ್‌ನ್ಯಾಶನಲ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿ ಮೊಹ್ಮದ್‌ಜಿಶಾನ್ ರಿಸಾಲ್ದಾರ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಮೊಹ್ಮದ್‌ಜಿಶಾನ್ 15 ಸೆಕೆಂಡ್ ನಲ್ಲಿ ನಿಗದಿ 100 ಮೀಟರ್ ಓಟವನ್ನು ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದಿಕೊಂಡು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.ಏಪ್ರೀಲ್ ಮೇ ತಿಂಗಳಲ್ಲಿ ನೇಪಾಳದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾರತ ದೇಶವನ್ನು ಜೀಶಾನ್ ಪ್ರತಿನಿಧಿಸಲಿದ್ದಾರೆ ಎಂದು ಶಾಲೆಯ ಪ್ರಾಚಾರ್ಯೆ ಪ್ರಭಾ ಚಿನಿವಾರ ತಿಳಿಸಿದ್ದಾರೆ. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದಿರುವ ಮೊಹ್ಮದ್‌ಜೀಶಾನ್ ಪತ್ರಕರ್ತ ಸೂರಜ್ ರಿಸಾಲ್ದಾರ್ ಅವರ ಪುತ್ರ.

ಅಭಿನಂದನೆ : ಯೂಥ್ ಗೇಮ್ಸ್ ಕೌನ್ಸಿಲ್ ಇಂಡಿಯಾ ಆಯೋಜಿಸಿರುವ ಈ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವ ಮೊಹ್ಮದಜಿಶಾನ್ ಸಾಧನೆಗೆ ಕರ್ನಾಟಕ ಮುಸ್ಲಿಂ ಕೌನ್ಸಿಲ್, ಬಸವ ಇಂಟರ್‌ನ್ಯಾಶನಲ್ ಶಾಲೆಯ ಚೇರಮನ್ ಶಿವಕುಮಾರ ಹರ್ಲಾಪುರ ಹಾಗೂ ಮುದ್ದೇಬಿಹಾಳದ ಜನತೆ,ರಿಸಾಲ್ದಾರ್ ಕುಟುಂಬದವರು ಅಭಿನಂದಿಸಿದ್ದಾರೆ.

Latest News

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 ,

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ;                                           ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ; ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಮುದ್ದೇಬಿಹಾಳ : ಉಪ ನೋಂದಣಿ ಕಛೇರಿಯಲ್ಲಿ ನೋಂದಾಯಿತವಲ್ಲದ ಡಿಜಿಟಲ್ ಈ ಸ್ಟ್ಯಾಂಪಿoಗ್ ಆನ್‌ಲೈನ್‌ನಲ್ಲಿ ಸೇವೆ ಸಲ್ಲಿಸುವ ಕುರಿತು ತರಬೇತಿ ಕಾರ್ಯಕ್ರಮ ಈಚೇಗೆ ಜರುಗಿತು. ಜಿಲ್ಲಾ ನೋಂದಣಿ ಇಲಾಖೆಯ ಅಭಿಯಂತರ ಚಂದ್ರಶೇಖರ ಕೊಣ್ಣೂರ,ತಹಶೀಲ್ದಾರ್ ಕೀರ್ತಿ ಚಾಲಕ್, ಉಪ ನೋಂದಣಾಧಿಕಾರಿ ಸಚಿನ ಖೈನೂರ ಅವರು ತಿಳಿವಳಿಕೆ ನೀಡಿದರು. ದಸ್ತು ಬರಹಗಾರ ಸಂಘದ ಅಧ್ಯಕ್ಷ ಎಚ್.ಆರ್.ಬಾಗವಾನ ಮಾತನಾಡಿ, ಡಿಜಿಟಲ್ ಈ ಸ್ಟ್ಯಾಂಪ ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.ವಿಜಯಪುರ ಜಿಲ್ಲಾ ನೋಂದಣಾಧಿಕಾರಿ

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ಶoಕರ ಈ.ಹೆಬ್ಬಾಳಮುದ್ದೇಬಿಹಾಳ : ಹೌದು.ಅಕ್ಷರಶಃ ಈ ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರಮುಖ ಸ್ತರದಲ್ಲಿರುವ ಹುದ್ದೆಗಳಲ್ಲಿರುವವರು ಪ್ರಾಮಾಣಿಕರೇ,ದಕ್ಷರೋ ಎಂದು ಒರೆಗಲ್ಲಿಗೆ ಹಚ್ಚಿ ನವೀರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಕಳ್ಳರ ಸಂತೆ ನಾಟಕ ವೈಚಾರಿಕ ಚಿಂತನೆಗೆ ಹಚ್ಚಿತು. ರಾಜ್ಯದಲ್ಲಿ ತೀವ್ರ ಬರಗಾಲ ಬಿದ್ದ ಸಮಯದಲ್ಲಿ ಅರಮನೆಯಲ್ಲಿನ ಖಜಾನೆ ಲೂಟಿಗೆ ಬರುವ ಕಳ್ಳರಿಬ್ಬರಲ್ಲಿ ಓರ್ವ ಕಳ್ಳ ತಾನು ನಂಬಿದ ವಿದ್ಯೆಯನ್ನು ತನ್ನ ಜೀವ ಉಳಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ವ್ಯವಸ್ಥೆ ಎಷ್ಟೊಂದು ಹದಗೆಟ್ಟಿದೆ ಎಂಬುದನ್ನು ನಾಟಕ