ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ ನಿಷ್ಕಿçಯತೆಯನ್ನು ವಿರೋಧಿಸಿ ಮೇ.20 ರಂದು ಒಂದು ದಿನದ ರಾಷ್ಟ್ರವ್ಯಾಪಿ ಬಂದ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಪದೇ ಪದೇ ಜ್ಞಾಪಕ ಪತ್ರಗಳ ಮೂಲಕ ವಿನಂತಿಸಿದರೂ ಇ-ಪೋರ್ಟಲ್‌ಗಳ ಮೂಲಕ ವಹಿವಾಟು ನಡೆಸುವ ಔಷಧ ವ್ಯಾಪಾರವು ಬೀರುವ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ. ಇದು ದೇಶಾದ್ಯಂತ ಔಷಧ ವ್ಯಾಪಾರಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಮತ್ತು ಅರೆ-ನಗರಗಳ ಪ್ರದೇಶಗಳಲ್ಲಿನ ಸಣ್ಣ ಔಷಧ ವ್ಯಾಪಾರಿಗಳು ವಹಿವಾಟು ನಡೆಸುವುದು ಕಷ್ಟಕರವಾಗಿದ್ದು ಔಷಧಗಳು ಸರಿಯಾದ ಸಮಯಕ್ಕೆ ಸಿಗದೇ ಅಮೂಲ್ಯ ಪ್ರಾಣಗಳು ಹಾನಿಯಾಗುವ ಅಪಾಯನ್ನು ಸೃಷ್ಟಿಸುತ್ತಿದೆ. ತಾತ್ಕಾಲಿಕ ಕೋವಿಡ್-ಅವಧಿಯ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಬೇಕು. ಇ-ಫಾರ್ಮಾಸಿ ಸಂಬAಧಿತ ಅಧಿಸೂಚನೆ ಜಿ.ಎಸ್.ಆರ್ 817 (ಇ) ಅನ್ನು ಹಿಂಪಡೆಯಬೇಕು. ಕಾರ್ಪೋರೇಟ್‌ಗಳಿಂದ ಅನ್ಯಾಯದ ಆಳವಾದ ರಿಯಾಯಿತಿಯನ್ನು ನಿಲ್ಲಿಸಲು. “ಲೆವೆಲ್-ಪ್ಲೇಯಿಂಗ್ ಫೀಲ್ಡ್” ನೀತಿಯನ್ನು ಪರಿಚಯಿಸಬೇಕು ಎಂದು ವಿಜಯಪುರ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿAದ ಸಲ್ಲಿಸಲಾದ ಮನವಿಯಲ್ಲಿ ತಿಳಿಸಲಾಗಿದೆ.

ಸಂಘದ ಅಧ್ಯಕ್ಷ ಕೆ.ಆರ್.ಎತ್ತಿನಮನಿ, ಕಾರ್ಯದರ್ಶಿ ಸಂಗಮೇಶ ಗುಡ್ಡೋಡಗಿ,ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷ ಜಿ.ಎಂ.ಹಿರೇಮಠ್,ಉಪಾಧ್ಯಕ್ಷೆ ಕವಿತಾ ಪಾಟೀಲ್,ಕಾರ್ಯದರ್ಶಿ ಇಲಿಯಾಸ್ ಮಾಗಿ,ಜಿಲ್ಲಾ ಸಹ ಕಾರ್ಯದರ್ಶಿ ಶಿವು ಸಿದ್ದಾಪುರ,ರವೀಂದ್ರ ಐಹೊಳೆ ,ಮಲ್ಲಿಕಾರ್ಜುನ ಓತಗೇರಿ,ಮಂಜುನಾಥ್ ಹಿರೇಮಠ , ರೂಪಾ ಪತ್ತಾರ್, ದಿನೇಶ್ ಲೋಕರೆ,ಸಂಜಯ್ ಓಸ್ವಾಲ್, ಎಚ್.ಎ.ಪಾಟೀಲ್, ಕುಮಾರಸ್ವಾಮಿ ಶಿವಯೋಗಿಮಠ, ಗೌರಿಶಂಕರ್ ಹಿರೇಮಠ್, ಮಲ್ಲಿಕಾರ್ಜುನ್ ಕಲ್ಲುಂಡಿ, ಶಬೀರ್ ಮಿರ್ಜಾ, ಪಾಂಡು ಥೋರಾಥ್ ಮೊದಲಾದವರು ಮನವಿಗೆ ಸಹಿ ಮಾಡಿದ್ದಾರೆ

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ