ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ ನಿಷ್ಕಿçಯತೆಯನ್ನು ವಿರೋಧಿಸಿ ಮೇ.20 ರಂದು ಒಂದು ದಿನದ ರಾಷ್ಟ್ರವ್ಯಾಪಿ ಬಂದ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಪದೇ ಪದೇ ಜ್ಞಾಪಕ ಪತ್ರಗಳ ಮೂಲಕ ವಿನಂತಿಸಿದರೂ ಇ-ಪೋರ್ಟಲ್‌ಗಳ ಮೂಲಕ ವಹಿವಾಟು ನಡೆಸುವ ಔಷಧ ವ್ಯಾಪಾರವು ಬೀರುವ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ. ಇದು ದೇಶಾದ್ಯಂತ ಔಷಧ ವ್ಯಾಪಾರಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಮತ್ತು ಅರೆ-ನಗರಗಳ ಪ್ರದೇಶಗಳಲ್ಲಿನ ಸಣ್ಣ ಔಷಧ ವ್ಯಾಪಾರಿಗಳು ವಹಿವಾಟು ನಡೆಸುವುದು ಕಷ್ಟಕರವಾಗಿದ್ದು ಔಷಧಗಳು ಸರಿಯಾದ ಸಮಯಕ್ಕೆ ಸಿಗದೇ ಅಮೂಲ್ಯ ಪ್ರಾಣಗಳು ಹಾನಿಯಾಗುವ ಅಪಾಯನ್ನು ಸೃಷ್ಟಿಸುತ್ತಿದೆ. ತಾತ್ಕಾಲಿಕ ಕೋವಿಡ್-ಅವಧಿಯ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಬೇಕು. ಇ-ಫಾರ್ಮಾಸಿ ಸಂಬAಧಿತ ಅಧಿಸೂಚನೆ ಜಿ.ಎಸ್.ಆರ್ 817 (ಇ) ಅನ್ನು ಹಿಂಪಡೆಯಬೇಕು. ಕಾರ್ಪೋರೇಟ್‌ಗಳಿಂದ ಅನ್ಯಾಯದ ಆಳವಾದ ರಿಯಾಯಿತಿಯನ್ನು ನಿಲ್ಲಿಸಲು. “ಲೆವೆಲ್-ಪ್ಲೇಯಿಂಗ್ ಫೀಲ್ಡ್” ನೀತಿಯನ್ನು ಪರಿಚಯಿಸಬೇಕು ಎಂದು ವಿಜಯಪುರ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿAದ ಸಲ್ಲಿಸಲಾದ ಮನವಿಯಲ್ಲಿ ತಿಳಿಸಲಾಗಿದೆ.

ಸಂಘದ ಅಧ್ಯಕ್ಷ ಕೆ.ಆರ್.ಎತ್ತಿನಮನಿ, ಕಾರ್ಯದರ್ಶಿ ಸಂಗಮೇಶ ಗುಡ್ಡೋಡಗಿ,ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷ ಜಿ.ಎಂ.ಹಿರೇಮಠ್,ಉಪಾಧ್ಯಕ್ಷೆ ಕವಿತಾ ಪಾಟೀಲ್,ಕಾರ್ಯದರ್ಶಿ ಇಲಿಯಾಸ್ ಮಾಗಿ,ಜಿಲ್ಲಾ ಸಹ ಕಾರ್ಯದರ್ಶಿ ಶಿವು ಸಿದ್ದಾಪುರ,ರವೀಂದ್ರ ಐಹೊಳೆ ,ಮಲ್ಲಿಕಾರ್ಜುನ ಓತಗೇರಿ,ಮಂಜುನಾಥ್ ಹಿರೇಮಠ , ರೂಪಾ ಪತ್ತಾರ್, ದಿನೇಶ್ ಲೋಕರೆ,ಸಂಜಯ್ ಓಸ್ವಾಲ್, ಎಚ್.ಎ.ಪಾಟೀಲ್, ಕುಮಾರಸ್ವಾಮಿ ಶಿವಯೋಗಿಮಠ, ಗೌರಿಶಂಕರ್ ಹಿರೇಮಠ್, ಮಲ್ಲಿಕಾರ್ಜುನ್ ಕಲ್ಲುಂಡಿ, ಶಬೀರ್ ಮಿರ್ಜಾ, ಪಾಂಡು ಥೋರಾಥ್ ಮೊದಲಾದವರು ಮನವಿಗೆ ಸಹಿ ಮಾಡಿದ್ದಾರೆ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ