Necessary measures for solving the problems of teachers and improving the quality of education

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಇರಲು ಕಾರಣ ನಾವೇ ಆಗಿದ್ದೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡದ ಜೆ.ಎಸ್.ಎಸ್. ಸನ್ನಿಧಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಅವರ ಸಂಯುಕ್ತಾಶ್ರಯದಲ್ಲಿ ಬದಲಾವಣೆಯ ಶಿಕ್ಷಣ; ಭವಿಷ್ಯದ ನಿರ್ಮಾಣ 2025-26 ಅಂಗವಾಗಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪ್ರಧಾನ ಗುರುಗಳ, ಮುಖ್ಯೋಪಾಧ್ಯಾರ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣೆ ಸಮಿತಿ (ಎಸ್.ಡಿ.ಎಂ.ಸಿ.) ಅಧ್ಯಕ್ಷರಿಗೆ ಆಯೋಜಿಸಿದ್ದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಸಮಾರೋಪ ಹಾಗೂ ಕಳೆದ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಸಮಾಜ, ಶಾಲೆ ಮತ್ತು ಮನೆಯ ವಾತಾವರಣದ ಮೇಲೆ ಮಕ್ಕಳು ಬೆಳೆಯುತ್ತಾರೆ. ಆದ್ದರಿಂದ ಮಕ್ಕಳ ಜೀವನದ ಮೇಲೆ ವಿಶೇಷವಾದ ಪರಿಣಾಮ ಬೀರುವ ಮಾತುಗಳನ್ನಾಡಿ, ತಿಳಿವಳಿಕೆ ಹೇಳಿ. ಅವರ ಜ್ಞಾನದ ಬಗ್ಗೆ, ಗುರಿಯ ಬಗ್ಗೆ ಶಿಕ್ಷಕರು ಮಕ್ಕಳಿಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.

ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣೆ ಸಮಿತಿಯು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹಾಗೂ ಅವರ ಶೈಕ್ಷಣಿಕ ಪ್ರಗತಿ ಸಾಧಿಸಲು ಹಾಗೂ ಮಕ್ಕಳ ಶ್ರೇಯೊಭಿವೃದ್ದಿಗಾಗಿ ಉತ್ತಮ ಕೆಲಸ ಮಾಡಬೇಕು. ನಮ್ಮ ಶಾಲೆಗಳ ಬಗ್ಗೆ ನಮ್ಮಗೆ ಹೆಮ್ಮೆ, ಗರ್ವ ಮೂಡುವಂತಾಗಬೇಕು ಎಂದು ತಿಳಿಸಿದರು.

ಶಾಲೆಯಲ್ಲಿ ಮಕ್ಕಳಿಗೆ ವಿಷಯದ ಬಗ್ಗೆ ತಿಳಿಸುವಾಗ ಅವರ ಕೌಶಲ್ಯ, ನೈತಿಕ ಮೌಲ್ಯಗಳು, ವಿವೇಕವನ್ನು ಹೆಚ್ಚಿಸಿ, ಮಕ್ಕಳನ್ನು ಸಮಾಜದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಪ್ರಯತ್ನ ಶಿಕ್ಷಕರು ಮಾಡಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಯ ಅಡಿಪಾಯವನ್ನು ಶಿಕ್ಷಕರು ಮಾಡಬೇಕಾದ ಕರ್ತವ್ಯವಾಗಿದೆ ಎಂದರು.

ಮಕ್ಕಳಿಗೆ ಸಮಾಜದಲ್ಲಿ ಜೀವಿಸುವುದನ್ನು ಕಲಿಸಿ, ಶಾಲೆಯ ವ್ಯವಸ್ಥೆ ಹಾಗೂ ಸಮಸ್ಯೆಗಳ ಬಗ್ಗೆ ಏನಾದರೂ ತೊಂದರೆಗಳಿದ್ದರೆ ಗಮನಕ್ಕೆ ತಂದರೆ, ಸರಿ ಮಾಡಲು ಪ್ರಯತ್ನಿಸುತ್ತೇವೆ. ಆದರೆ ಮಕ್ಕಳಿಗೆ ಜೀವನ ರೂಪಿಸುವುದು ಶಿಕ್ಷಕರ ಕೈಯಲ್ಲಿ ಇರುವುದರಿಂದ ಮಕ್ಕಳಲ್ಲಿ ಇರುವ ಕೌಶಲ್ಯದ ಬಗ್ಗೆ, ತಂತ್ರಜ್ಞಾನದ ಬಗ್ಗೆ ಆಸಕ್ತಿ ಇದ್ದರೆ ಅವರನ್ನು ಗುರುತಿಸಿ ಮತ್ತು ಆ ವಿಷಯದ ಬಗ್ಗೆ ಅವರಿಗೆ ತಿಳಿಹೇಳಿ ಎಂದು ಹೇಳಿದರು.

ಮನೆಯಲ್ಲಿ ಉತ್ತಮ ಸಂಸ್ಕಾರದ ಬಗ್ಗೆ ಚರ್ಚಿಸುವ ಹಾಗೂ ಮಕ್ಕಳಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಪ್ರಯತ್ನ ಮಾಡಬೇಕು. ಆದರೇ ನಾವು ಇದಾವುದು ಇಂದು ಮಾಡದೇ ರಾಜಕೀಯ, ಜಾತಿ, ಮೇಲು ಕೀಳು ಮಾತನಾಡಿ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತೇವೆ. ಇದು ಮಕ್ಕಳ ಮೇಲೆ ಬಹಳಷ್ಟು ಮಾನಸಿಕ ಪ್ರಭಾವ ಬೀರುತ್ತಿದೆ. ನಾವು ಮಕ್ಕಳ ಭವಿಷ್ಯದ ಕುರಿತು ಎಚ್ಚರಿಕೆ ಮಹಿಸಬೇಕು. ಅವರ ಚಲನ ವಲನದ ಬಗ್ಗೆ ನಿತ್ಯ ಕಾಳಜಿ ವಹಿಸಿ ಅವರನ್ನು ತಿದ್ದುವ ಕೆಲಸ ಮಾಡಬೇಕು. ಇಂದಿನ ಶಿಕ್ಷಕರು, ನಾವು ಮಕ್ಕಳಿಗೆ ಜ್ಞಾನ ಒದಗಿಸುವಲ್ಲಿ ವಿಫಲರಾಗುತ್ತಿದ್ದು, ಅವರನ್ನು ಪ್ರೀತಿಯಿಂದಲೇ ಜ್ಞಾನದ ಮಾರ್ಗದಲ್ಲಿ ಕರೆದುಕೊಂಡು ಹೋಗಬೇಕು. ಮನೆಯಿಂದಲೇ ಮಕ್ಕಳಿಗೆ ಗೌರವ ಮನೋಭಾವ, ಪ್ರಾಮಾಣಿಕತೆ, ಸಜ್ಜನಿಕ್ಕೆ, ಸರಳತೆ ಕಲಿಸಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕರನ್ನು ಹಾಗೂ ಜಿಲ್ಲೆಗೆ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು. ಜಿಲ್ಲೆಗೆ ಅತಿ ಹೆಚ್ವು ಅಂಕಪಡೆದ ವಿದ್ಯಾರ್ಥಿಗಳಿಗೆ ಸಚಿವ ಸಂತೋಷ ಲಾಡ್ ಅವರು ತಮ್ಮ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ತಲಾ ರೂ.10 ಸಾವಿರ ಪ್ರೋತ್ಸಾಹಧನ ನೀಡಿ, ಗೌರವಿಸಿದರು.

ಸಮಾರಂಭದಲ್ಲಿ ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಜಿಲ್ಲೆಯ ಎಲ್ಲ ಕ್ಷೇತ್ರಶಿಕ್ಷಣಾಧಿಕಾರಿಗಳು, ಪ್ರಾಥಮಿಕ, ಪ್ರೌಢಶಾಲೆಗಳ ಪ್ರಧಾನ ಗುರುಗಳು, ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ.ಅಧ್ಯಕ್ಷರು, ಜನಪ್ರತಿನಿಗಳು ಭಾಗವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ