New BJP district president honors shop: Appeasement politics by Congress- Nadahalli

ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಅಂಗಡಿಗೆ ಸನ್ಮಾನ:ಕಾಂಗ್ರೆಸ್‌ನಿಂದ ತುಷ್ಟೀಕರಣದ ರಾಜಕಾರಣ- ನಡಹಳ್ಳಿ

ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಅಂಗಡಿಗೆ ಸನ್ಮಾನ:ಕಾಂಗ್ರೆಸ್‌ನಿಂದ ತುಷ್ಟೀಕರಣದ ರಾಜಕಾರಣ- ನಡಹಳ್ಳಿ

Ad
Ad

ಮುದ್ದೇಬಿಹಾಳ : ಮುಸ್ಲಿಂರ ತುಷ್ಟೀಕರಣದಲ್ಲಿ ಕಾಂಗ್ರೆಸ್ ಪಕ್ಷ ತೊಡಗಿದೆ. ಸಂವಿಧಾನದಲ್ಲಿ ಅವಕಾಶವೇ ಇಲ್ಲದ ಧರ್ಮದ ಆಧಾರದ ಮೇಲೆ ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ಕೊಡುವುದಾಗಿ ಹೇಳುವ ಡಿಸಿಎಂ ಡಿ. ಕೆ. ಶಿವಕುಮಾರ ಮುಸ್ಲಿಂರಿಗೆ ಮೀಸಲಾತಿ ಕೊಡುವುದಕ್ಕಾಗಿ ಸಂವಿಧಾನವನ್ನೂ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡುತ್ತಾರೆ ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಮಾಜಿ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ ಹೇಳಿದರು.

Ad
Ad

ಪಟ್ಟಣದ ದಾಸೋಹ ಭವನದಲ್ಲಿರುವ ಬಿಜೆಪಿ ಮಂಡಲ ಕಚೇರಿಯಲ್ಲಿ ಬುಧವಾರ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಓಟಬ್ಯಾಂಕ್ ಸಲುವಾಗಿ ಮುಸ್ಲಿಂರಿಗಾಗಿ 2000 ಕೋಟಿ ರೂ. ವಿಶೇಷ ಅನುದಾನವನ್ನು ಶಾದಿಭಾಗ್ಯ ಹೆಸರಿನಲ್ಲಿ ತೆಗೆದಿರಿಸಿದ್ದಾರೆ. ಎಲ್ಲ ಜಾತಿ, ಜನಾಂಗದವರಲ್ಲಿ ಬಡವರು,ಹಿಂದುಳಿದವರು ಇದ್ದಾರೆ. ಆದರೆ ಮುಸ್ಲಿಂರ ಓಲೈಕೆಯಲ್ಲಿ ಕಾಂಗ್ರೆಸ್ ತೊಡಗಿದೆ ಎಂದು ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ ನಡೆಸಿದರು.

ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಗುರುಲಿಂಗಪ್ಪ ಅಂಗಡಿ ಅವರು ಆಯ್ಕೆಯಾಗಿರುವುದು ಜಿಲ್ಲೆಯ ಕಾರ್ಯಕರ್ತರಿಗೆ ಹರ್ಷವನ್ನುಂಟು ಮಾಡಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಹಿರಿಯ ನಾಯಕರಾದ ಬಿ. ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಕೈ ಬಲಪಡಿಸಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷದ ಗೊಂದಲಗಳನ್ನು ನಾಯಕರು ಪರಿಹರಿಸಿದ್ದಾರೆ. ಪಕ್ಷದಲ್ಲಿ ಈಗ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದರು.

ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ನಾಯಕರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷ ಶೇ.4ರ ಮೀಸಲಿನ ಹೆಸರಿನಲ್ಲಿ ಮುಸ್ಲಿಂರ ಮೂಗಿಗೆ ತುಪ್ಪ ಒರೆಸುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ನಿಂತು ಹೋಗಿದ್ದು ಈ ಸರ್ಕಾರದಲ್ಲಿ ಯಾರೊಬ್ಬರೂ ನೆಮ್ಮದಿಯಿಂದ ಇಲ್ಲ. ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಮುಸ್ಲಿಂರು ಬಿಜೆಪಿಯ ಹಿಂದೆ ಇದ್ದಾರೆ. ಕಾಂಗ್ರೆಸ್‌ನ ಕುತಂತ್ರದ ಬಗ್ಗೆ ಮುಸ್ಲಿಂರು ದೇಶದಲ್ಲಿ ಜಾಗೃತರಾಗುವ ಕಾಲ ಸನ್ನಿಹಿತವಾಗಿದೆ ಎಂದರು.

ಬಿಜೆಪಿ ಜಿಲ್ಲಾ ಮುಖಂಡ ಸುರೇಶಗೌಡ ಬಿರಾದಾರ ಮಾತನಾಡಿ, ಪಕ್ಷದ ವರಿಷ್ಠರು ಕೆಲವರಿಂದ ಪಕ್ಷದಲ್ಲಿ ಉಂಟಾಗಿದ್ದ ಭಿನ್ನಮತಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುಲಿಂಗಪ್ಪ ಅಂಗಡಿಯವರಂತಹ ಸೌಮ್ಯ ಸ್ವಭಾವದ ವ್ಯಕ್ತಿಯನ್ನು ಆಯ್ಕೆ ಮಾಡಿರುವ ನಡಹಳ್ಳಿಯವರಾದಿಯಾಗಿ ಪಕ್ಷದ ಎಲ್ಲ ವರಿಷ್ಠರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಪಕ್ಷದ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮುಖಂಡರಾದ ಎಂ. ಎಸ್. ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೇಮರಡ್ಡಿ ಮೇಟಿ, ಎಂ.ಬಿ.ಅಂಗಡಿ, ಗಂಗಾಧರರಾವ ನಾಡಗೌಡರ, ಕೆಂಚಪ್ಪ ಬಿರಾದಾರ, ಮಲಕೇಂದ್ರಗೌಡ ಪಾಟೀಲ್, ಸುರೇಶಗೌಡ ಬಿರಾದಾರ ಮತ್ತಿತರರು ಮಾತನಾಡಿದರು. ಪಕ್ಷದ ಮುಖಂಡ ಬಿ. ಪಿ. ಕುಲಕರ್ಣಿ, ಸೋಮನಗೌಡ ಬಿರಾದಾರ, ಗೌರಮ್ಮ ಹುನಗುಂದ, ಮಂಜುನಾಥಗೌಡ ಪಾಟೀಲ, ಪರಶುರಾಮ ನಾಲತವಾಡ, ಸಿದ್ಧರಾಜ ಹೊಳಿ ಪುರಸಭೆ ಸದಸ್ಯರು,ಪಕ್ಷದ ಕಾರ್ಯಕರ್ತರು ಇದ್ದರು.

ಅಂಗಡಿ ಸ್ವಾಗತದ ನೆಪ, ಯತ್ನಾಳ ಉಚ್ಛಾಟನೆ ಹರ್ಷ : ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಹಿಂದೆ ಎ. ಎಸ್. ಪಾಟೀಲ್ ನಡಹಳ್ಳಿ ಅವರ ವಿರುದ್ಧ ಸ್ಪರ್ಧಿಸಿ ಪರಾಜಿತರಾಗಿದ್ದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದ ಕೇಂದ್ರ ಶಿಸ್ತು ಸಮೀತಿ ಬುಧವಾರ ಪಕ್ಷದಿಂದ ಉಚ್ಛಾಟಿಸಿದ ಸುದ್ದಿ ಬಹಿರಂಗಗೊಳ್ಳುತ್ತಲೇ ಮಾಜಿ ಶಾಸಕ ನಡಹಳ್ಳಿಯವರ ನಿವಾಸದಲ್ಲಿ ಸಂಭ್ರಮ ಮನೆ ಮಾಡಿತ್ತು. ನೂತನ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರನ್ನು ಸ್ವಾಗತಿಸುವ ನೆಪದಲ್ಲಿ ಅಂಬೇಡ್ಕರ್ ವೃತ್ತ ಹಾಗೂ ಮಾಜಿ ಶಾಸಕ ನಡಹಳ್ಳಿಯವರ ಮನೆ ಮುಂದೆ ಪಟಾಕಿಯನ್ನೂ ಸಿಡಿಸಿ ನಡಹಳ್ಳಿಯವರ ಅಭಿಮಾನಿಗಳು, ಕೆಲವು ಕಾರ್ಯಕರ್ತರು ಸಂಭ್ರಮಿಸಿದರು. ಇದು ಯತ್ನಾಳರ ಉಚ್ಛಾಟನೆಗೆ ವ್ಯಕ್ತಪಡಿಸಿದ ಹರ್ಷವೋ, ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಅಂಗಡಿ ಅವರ ಆಗಮನಕ್ಕೆ ತೋರಿದ ಸ್ವಾಗತವೋ ಎಂಬುದು ಚರ್ಚೆಗೆ ನಾಂದಿ ಹಾಡಿತು. ನಡಹಳ್ಳಿಯವರಂತೂ ಸಂಭ್ರಮದಿಂದ ಅಂಗಡಿಯವರ ಸನ್ಮಾನ ಕಾರ್ಯಕ್ರಮದಲ್ಲಿ ಓಡಾಡಿದ್ದು ವಿಶೇಷವಾಗಿತ್ತು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ