One police constable is enough to arrest Kumaraswamy.. CM hits back at HDK

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

ಬೆಂಗಳೂರು: ಬಹುತೇಕ ನ್ಯೂಸ್ ಚಾನೆಲ್‌ಗಳು (News chanel) ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದ್ದು, ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ಪೆಟ್ಟುಕೊಡಲು ಸಿದ್ಧತೆ ನಡೆಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಟಿವಿ ಚಾನೆಲ್‌ಗಳ ವಿರುದ್ಧ ಕಾಂಗ್ರೆಸ್ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದೆಯಂತೆ. ಅಂದಹಾಗೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರೈಸಿದ್ದು, ಇದೀಗ 2ನೇ ವರ್ಷ ಪೂರೈಸುವತ್ತ ಮುನ್ನಡೆದಿದೆ. ಹೀಗಿದ್ದಾಗಲೇ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ & ಜೆಡಿಎಸ್ ನಾಯಕರು ಸಾಲು ಸಾಲು ಗಂಭೀರ ಆರೋಪಗಳನ್ನ ಮಾಡುತ್ತಿದ್ದಾರೆ.

ಅದರಲ್ಲೂ ‘ಮುಡಾ’ ಸೈಟ್ ಹಗರಣ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳ ನಾಯಕರು ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್ ಸರ್ಕಾರದ ಪ್ರಮುಖರ ವಿರುದ್ಧವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ಸಂಘಟಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಮಾಧ್ಯಮಗಳು ಕೂಡ ಮುಖ್ಯವಾಗಿ ಕನ್ನಡ ನಾಡಿನ ಟಿವಿ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದೆ.

ಚಾನೆಲ್‌ಗಳಿಗೆ ಆಘಾತ!

15 ವರ್ಷಗಳ ಹಿಂದೆ ಕನ್ನಡದಲ್ಲಿ ನ್ಯೂಸ್ ಚಾನೆಲ್ ಗಳನ್ನು ಭೂತ ಕನ್ನಡಿ ಹಿಡಿದು ಟಿವಿ ಸ್ಕ್ರೀನ್ ನೋಡಿ ಹುಡಕಾಡಬೇಕಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಕನ್ನಡದಲ್ಲಿ ನೂರಾರು ನ್ಯೂಸ್ ಚಾನೆಲ್ ಇವೆ. ಹೀಗಿದ್ದರೂ ಬಹುತೇಕ ಕನ್ನಡದ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ವಿರೋಧಿ ಸುದ್ದಿ ಪ್ರಕಟ ಮಾಡುತ್ತಿವೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.

ಹೀಗಾಗಿ, ಹೊಸ ಪ್ಲಾನ್ ಮಾಡಿದೆ ಕರ್ನಾಟಕ ಕಾಂಗ್ರೆಸ್. ಕರ್ನಾಟಕ ಕಾಂಗ್ರೆಸ್ ಈಗ ಮಾಡಿಕೊಂಡ ಪ್ಲಾನ್ ಪ್ರಕಾರ, ಶೀಘ್ರದಲ್ಲೇ ಕಾಂಗ್ರೆಸ್ ನೇತೃತ್ವದಲ್ಲಿ ಹೊಸ ನ್ಯೂಸ್ ಚಾನೆಲ್ ಕನ್ನಡದಲ್ಲಿ ಆರಂಭ ಮಾಡಲು ಚಿಂತನೆ ನಡೆದಿದೆ. ಹಾಗೇ, ಇಂಗ್ಲಿಷ್ ಭಾಷೆಯಲ್ಲೂ ಚಾನೆಲ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಕಡೆ ನ್ಯೂಸ್ ಪೇಪರ್ ಒಂದನ್ನು ಕರ್ನಾಟಕ ಕಾಂಗ್ರೆಸ್ ವತಿಯಿಂದ ಆರಂಭ ಮಾಡೋದಕ್ಕೆ ಚರ್ಚೆಗಳು ನಡೆದಿವೆಯಂತೆ. ಹೀಗೆ ಕರ್ನಾಟಕ ಕಾಂಗ್ರೆಸ್ ವತಿಯಿಂದ ಸ್ವಂತ ನ್ಯೂಸ್ ಚಾನೆಲ್ ಅಥವಾ ಮಾಧ್ಯಮ ಸಂಸ್ಥೆ ಆರಂಭ ಮಾಡುವ ಬಗ್ಗೆ ನಡೆದಿರುವ ಚಿಂತನೆ ಕುರಿತು ಇದೀಗ, ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮಾಹಿತಿ ನಿಡಿದ್ದಾರೆ.

ಪ್ಲಾನ್ ಜಾರಿ ಆಗುತ್ತಾ?

ಕನ್ನಡ ನ್ಯೂಸ್ ಚಾನೆಲ್‌ಗಳು ತಮ್ಮ ವಿರುದ್ಧ ಬೇಕು ಅಂತಲೇ ಸುದ್ದಿಯನ್ನ ಮಾಡುತ್ತಿವೆ. ಇದರ ಹಿಂದೆ ಖುದ್ದು ಬಿಜೆಪಿ ನಾಯಕರ & ಜೆಡಿಎಸ್ ನಾಯಕರ ಕುತಂತ್ರವು ಅಡಗಿದೆ ಎಂಬ ಆರೋಪವು ಕರ್ನಾಟಕ ಕಾಂಗ್ರೆಸ್ ನಾಯಕರದ್ದು.

ಇದನ್ನೂ ಓದಿ: ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ಪರಿಸ್ಥಿತಿ ಹೀಗಿದ್ದಾಗಲೇ ಸ್ವಂತ ಮಾಧ್ಯಮ ಸಂಸ್ಥೆ ಆರಂಭ ಮಾಡಿ ಬಿಜೆಪಿ & ಜೆಡಿಎಸ್ ನಾಯಕರ ವಿರುದ್ಧ ತೊಡೆ ತಟ್ಟುವ ಐಡಿಯಾ ಕರ್ನಾಟಕ ಕಾಂಗ್ರೆಸ್ ನಾಯಕರದ್ದಾಗಿದೆ. ಆದರೆ, ಈ ಪ್ಲಾನ್ ಯಾವಾಗ ಜಾರಿ ಆಗುತ್ತೆ? ಅಥವಾ ಜಾರಿ ಆಗುವ ಮೊದಲೇ ಐಡಿಯಾ ಮುಗಿದು ಹೋಗುತ್ತಾ? ಎಂಬುದು ಕುತೂಹಲ ಮೂಡಿಸಿದೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ