One police constable is enough to arrest Kumaraswamy.. CM hits back at HDK

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

ಬೆಂಗಳೂರು: ಬಹುತೇಕ ನ್ಯೂಸ್ ಚಾನೆಲ್‌ಗಳು (News chanel) ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದ್ದು, ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ಪೆಟ್ಟುಕೊಡಲು ಸಿದ್ಧತೆ ನಡೆಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಟಿವಿ ಚಾನೆಲ್‌ಗಳ ವಿರುದ್ಧ ಕಾಂಗ್ರೆಸ್ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದೆಯಂತೆ. ಅಂದಹಾಗೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರೈಸಿದ್ದು, ಇದೀಗ 2ನೇ ವರ್ಷ ಪೂರೈಸುವತ್ತ ಮುನ್ನಡೆದಿದೆ. ಹೀಗಿದ್ದಾಗಲೇ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ & ಜೆಡಿಎಸ್ ನಾಯಕರು ಸಾಲು ಸಾಲು ಗಂಭೀರ ಆರೋಪಗಳನ್ನ ಮಾಡುತ್ತಿದ್ದಾರೆ.

ಅದರಲ್ಲೂ ‘ಮುಡಾ’ ಸೈಟ್ ಹಗರಣ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳ ನಾಯಕರು ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್ ಸರ್ಕಾರದ ಪ್ರಮುಖರ ವಿರುದ್ಧವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ಸಂಘಟಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಮಾಧ್ಯಮಗಳು ಕೂಡ ಮುಖ್ಯವಾಗಿ ಕನ್ನಡ ನಾಡಿನ ಟಿವಿ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದೆ.

ಚಾನೆಲ್‌ಗಳಿಗೆ ಆಘಾತ!

15 ವರ್ಷಗಳ ಹಿಂದೆ ಕನ್ನಡದಲ್ಲಿ ನ್ಯೂಸ್ ಚಾನೆಲ್ ಗಳನ್ನು ಭೂತ ಕನ್ನಡಿ ಹಿಡಿದು ಟಿವಿ ಸ್ಕ್ರೀನ್ ನೋಡಿ ಹುಡಕಾಡಬೇಕಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಕನ್ನಡದಲ್ಲಿ ನೂರಾರು ನ್ಯೂಸ್ ಚಾನೆಲ್ ಇವೆ. ಹೀಗಿದ್ದರೂ ಬಹುತೇಕ ಕನ್ನಡದ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ವಿರೋಧಿ ಸುದ್ದಿ ಪ್ರಕಟ ಮಾಡುತ್ತಿವೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.

ಹೀಗಾಗಿ, ಹೊಸ ಪ್ಲಾನ್ ಮಾಡಿದೆ ಕರ್ನಾಟಕ ಕಾಂಗ್ರೆಸ್. ಕರ್ನಾಟಕ ಕಾಂಗ್ರೆಸ್ ಈಗ ಮಾಡಿಕೊಂಡ ಪ್ಲಾನ್ ಪ್ರಕಾರ, ಶೀಘ್ರದಲ್ಲೇ ಕಾಂಗ್ರೆಸ್ ನೇತೃತ್ವದಲ್ಲಿ ಹೊಸ ನ್ಯೂಸ್ ಚಾನೆಲ್ ಕನ್ನಡದಲ್ಲಿ ಆರಂಭ ಮಾಡಲು ಚಿಂತನೆ ನಡೆದಿದೆ. ಹಾಗೇ, ಇಂಗ್ಲಿಷ್ ಭಾಷೆಯಲ್ಲೂ ಚಾನೆಲ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಕಡೆ ನ್ಯೂಸ್ ಪೇಪರ್ ಒಂದನ್ನು ಕರ್ನಾಟಕ ಕಾಂಗ್ರೆಸ್ ವತಿಯಿಂದ ಆರಂಭ ಮಾಡೋದಕ್ಕೆ ಚರ್ಚೆಗಳು ನಡೆದಿವೆಯಂತೆ. ಹೀಗೆ ಕರ್ನಾಟಕ ಕಾಂಗ್ರೆಸ್ ವತಿಯಿಂದ ಸ್ವಂತ ನ್ಯೂಸ್ ಚಾನೆಲ್ ಅಥವಾ ಮಾಧ್ಯಮ ಸಂಸ್ಥೆ ಆರಂಭ ಮಾಡುವ ಬಗ್ಗೆ ನಡೆದಿರುವ ಚಿಂತನೆ ಕುರಿತು ಇದೀಗ, ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮಾಹಿತಿ ನಿಡಿದ್ದಾರೆ.

ಪ್ಲಾನ್ ಜಾರಿ ಆಗುತ್ತಾ?

ಕನ್ನಡ ನ್ಯೂಸ್ ಚಾನೆಲ್‌ಗಳು ತಮ್ಮ ವಿರುದ್ಧ ಬೇಕು ಅಂತಲೇ ಸುದ್ದಿಯನ್ನ ಮಾಡುತ್ತಿವೆ. ಇದರ ಹಿಂದೆ ಖುದ್ದು ಬಿಜೆಪಿ ನಾಯಕರ & ಜೆಡಿಎಸ್ ನಾಯಕರ ಕುತಂತ್ರವು ಅಡಗಿದೆ ಎಂಬ ಆರೋಪವು ಕರ್ನಾಟಕ ಕಾಂಗ್ರೆಸ್ ನಾಯಕರದ್ದು.

ಇದನ್ನೂ ಓದಿ: ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ಪರಿಸ್ಥಿತಿ ಹೀಗಿದ್ದಾಗಲೇ ಸ್ವಂತ ಮಾಧ್ಯಮ ಸಂಸ್ಥೆ ಆರಂಭ ಮಾಡಿ ಬಿಜೆಪಿ & ಜೆಡಿಎಸ್ ನಾಯಕರ ವಿರುದ್ಧ ತೊಡೆ ತಟ್ಟುವ ಐಡಿಯಾ ಕರ್ನಾಟಕ ಕಾಂಗ್ರೆಸ್ ನಾಯಕರದ್ದಾಗಿದೆ. ಆದರೆ, ಈ ಪ್ಲಾನ್ ಯಾವಾಗ ಜಾರಿ ಆಗುತ್ತೆ? ಅಥವಾ ಜಾರಿ ಆಗುವ ಮೊದಲೇ ಐಡಿಯಾ ಮುಗಿದು ಹೋಗುತ್ತಾ? ಎಂಬುದು ಕುತೂಹಲ ಮೂಡಿಸಿದೆ.

Latest News

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ