One police constable is enough to arrest Kumaraswamy.. CM hits back at HDK

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

ಬೆಂಗಳೂರು: ಬಹುತೇಕ ನ್ಯೂಸ್ ಚಾನೆಲ್‌ಗಳು (News chanel) ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದ್ದು, ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ಪೆಟ್ಟುಕೊಡಲು ಸಿದ್ಧತೆ ನಡೆಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಟಿವಿ ಚಾನೆಲ್‌ಗಳ ವಿರುದ್ಧ ಕಾಂಗ್ರೆಸ್ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದೆಯಂತೆ. ಅಂದಹಾಗೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರೈಸಿದ್ದು, ಇದೀಗ 2ನೇ ವರ್ಷ ಪೂರೈಸುವತ್ತ ಮುನ್ನಡೆದಿದೆ. ಹೀಗಿದ್ದಾಗಲೇ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ & ಜೆಡಿಎಸ್ ನಾಯಕರು ಸಾಲು ಸಾಲು ಗಂಭೀರ ಆರೋಪಗಳನ್ನ ಮಾಡುತ್ತಿದ್ದಾರೆ.

ಅದರಲ್ಲೂ ‘ಮುಡಾ’ ಸೈಟ್ ಹಗರಣ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳ ನಾಯಕರು ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್ ಸರ್ಕಾರದ ಪ್ರಮುಖರ ವಿರುದ್ಧವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ಸಂಘಟಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಮಾಧ್ಯಮಗಳು ಕೂಡ ಮುಖ್ಯವಾಗಿ ಕನ್ನಡ ನಾಡಿನ ಟಿವಿ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದೆ.

ಚಾನೆಲ್‌ಗಳಿಗೆ ಆಘಾತ!

15 ವರ್ಷಗಳ ಹಿಂದೆ ಕನ್ನಡದಲ್ಲಿ ನ್ಯೂಸ್ ಚಾನೆಲ್ ಗಳನ್ನು ಭೂತ ಕನ್ನಡಿ ಹಿಡಿದು ಟಿವಿ ಸ್ಕ್ರೀನ್ ನೋಡಿ ಹುಡಕಾಡಬೇಕಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಕನ್ನಡದಲ್ಲಿ ನೂರಾರು ನ್ಯೂಸ್ ಚಾನೆಲ್ ಇವೆ. ಹೀಗಿದ್ದರೂ ಬಹುತೇಕ ಕನ್ನಡದ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ವಿರೋಧಿ ಸುದ್ದಿ ಪ್ರಕಟ ಮಾಡುತ್ತಿವೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.

ಹೀಗಾಗಿ, ಹೊಸ ಪ್ಲಾನ್ ಮಾಡಿದೆ ಕರ್ನಾಟಕ ಕಾಂಗ್ರೆಸ್. ಕರ್ನಾಟಕ ಕಾಂಗ್ರೆಸ್ ಈಗ ಮಾಡಿಕೊಂಡ ಪ್ಲಾನ್ ಪ್ರಕಾರ, ಶೀಘ್ರದಲ್ಲೇ ಕಾಂಗ್ರೆಸ್ ನೇತೃತ್ವದಲ್ಲಿ ಹೊಸ ನ್ಯೂಸ್ ಚಾನೆಲ್ ಕನ್ನಡದಲ್ಲಿ ಆರಂಭ ಮಾಡಲು ಚಿಂತನೆ ನಡೆದಿದೆ. ಹಾಗೇ, ಇಂಗ್ಲಿಷ್ ಭಾಷೆಯಲ್ಲೂ ಚಾನೆಲ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಕಡೆ ನ್ಯೂಸ್ ಪೇಪರ್ ಒಂದನ್ನು ಕರ್ನಾಟಕ ಕಾಂಗ್ರೆಸ್ ವತಿಯಿಂದ ಆರಂಭ ಮಾಡೋದಕ್ಕೆ ಚರ್ಚೆಗಳು ನಡೆದಿವೆಯಂತೆ. ಹೀಗೆ ಕರ್ನಾಟಕ ಕಾಂಗ್ರೆಸ್ ವತಿಯಿಂದ ಸ್ವಂತ ನ್ಯೂಸ್ ಚಾನೆಲ್ ಅಥವಾ ಮಾಧ್ಯಮ ಸಂಸ್ಥೆ ಆರಂಭ ಮಾಡುವ ಬಗ್ಗೆ ನಡೆದಿರುವ ಚಿಂತನೆ ಕುರಿತು ಇದೀಗ, ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮಾಹಿತಿ ನಿಡಿದ್ದಾರೆ.

ಪ್ಲಾನ್ ಜಾರಿ ಆಗುತ್ತಾ?

ಕನ್ನಡ ನ್ಯೂಸ್ ಚಾನೆಲ್‌ಗಳು ತಮ್ಮ ವಿರುದ್ಧ ಬೇಕು ಅಂತಲೇ ಸುದ್ದಿಯನ್ನ ಮಾಡುತ್ತಿವೆ. ಇದರ ಹಿಂದೆ ಖುದ್ದು ಬಿಜೆಪಿ ನಾಯಕರ & ಜೆಡಿಎಸ್ ನಾಯಕರ ಕುತಂತ್ರವು ಅಡಗಿದೆ ಎಂಬ ಆರೋಪವು ಕರ್ನಾಟಕ ಕಾಂಗ್ರೆಸ್ ನಾಯಕರದ್ದು.

ಇದನ್ನೂ ಓದಿ: ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ಪರಿಸ್ಥಿತಿ ಹೀಗಿದ್ದಾಗಲೇ ಸ್ವಂತ ಮಾಧ್ಯಮ ಸಂಸ್ಥೆ ಆರಂಭ ಮಾಡಿ ಬಿಜೆಪಿ & ಜೆಡಿಎಸ್ ನಾಯಕರ ವಿರುದ್ಧ ತೊಡೆ ತಟ್ಟುವ ಐಡಿಯಾ ಕರ್ನಾಟಕ ಕಾಂಗ್ರೆಸ್ ನಾಯಕರದ್ದಾಗಿದೆ. ಆದರೆ, ಈ ಪ್ಲಾನ್ ಯಾವಾಗ ಜಾರಿ ಆಗುತ್ತೆ? ಅಥವಾ ಜಾರಿ ಆಗುವ ಮೊದಲೇ ಐಡಿಯಾ ಮುಗಿದು ಹೋಗುತ್ತಾ? ಎಂಬುದು ಕುತೂಹಲ ಮೂಡಿಸಿದೆ.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ