One police constable is enough to arrest Kumaraswamy.. CM hits back at HDK

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

News chanel: ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ನಿಂದ BIG SHOCK!

ಬೆಂಗಳೂರು: ಬಹುತೇಕ ನ್ಯೂಸ್ ಚಾನೆಲ್‌ಗಳು (News chanel) ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದ್ದು, ಕನ್ನಡ ನ್ಯೂಸ್ ಚಾನೆಲ್ ಗಳಿಗೆ ಕಾಂಗ್ರೆಸ್ ಪೆಟ್ಟುಕೊಡಲು ಸಿದ್ಧತೆ ನಡೆಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಟಿವಿ ಚಾನೆಲ್‌ಗಳ ವಿರುದ್ಧ ಕಾಂಗ್ರೆಸ್ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದೆಯಂತೆ. ಅಂದಹಾಗೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರೈಸಿದ್ದು, ಇದೀಗ 2ನೇ ವರ್ಷ ಪೂರೈಸುವತ್ತ ಮುನ್ನಡೆದಿದೆ. ಹೀಗಿದ್ದಾಗಲೇ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ & ಜೆಡಿಎಸ್ ನಾಯಕರು ಸಾಲು ಸಾಲು ಗಂಭೀರ ಆರೋಪಗಳನ್ನ ಮಾಡುತ್ತಿದ್ದಾರೆ.

ಅದರಲ್ಲೂ ‘ಮುಡಾ’ ಸೈಟ್ ಹಗರಣ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳ ನಾಯಕರು ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್ ಸರ್ಕಾರದ ಪ್ರಮುಖರ ವಿರುದ್ಧವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ಸಂಘಟಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಮಾಧ್ಯಮಗಳು ಕೂಡ ಮುಖ್ಯವಾಗಿ ಕನ್ನಡ ನಾಡಿನ ಟಿವಿ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದಾಗಿದೆ.

ಚಾನೆಲ್‌ಗಳಿಗೆ ಆಘಾತ!

15 ವರ್ಷಗಳ ಹಿಂದೆ ಕನ್ನಡದಲ್ಲಿ ನ್ಯೂಸ್ ಚಾನೆಲ್ ಗಳನ್ನು ಭೂತ ಕನ್ನಡಿ ಹಿಡಿದು ಟಿವಿ ಸ್ಕ್ರೀನ್ ನೋಡಿ ಹುಡಕಾಡಬೇಕಾಗಿತ್ತು. ಆದರೆ, ಈಗಿನ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಕನ್ನಡದಲ್ಲಿ ನೂರಾರು ನ್ಯೂಸ್ ಚಾನೆಲ್ ಇವೆ. ಹೀಗಿದ್ದರೂ ಬಹುತೇಕ ಕನ್ನಡದ ನ್ಯೂಸ್ ಚಾನೆಲ್‌ಗಳು ಕಾಂಗ್ರೆಸ್ ವಿರೋಧಿ ಸುದ್ದಿ ಪ್ರಕಟ ಮಾಡುತ್ತಿವೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.

ಹೀಗಾಗಿ, ಹೊಸ ಪ್ಲಾನ್ ಮಾಡಿದೆ ಕರ್ನಾಟಕ ಕಾಂಗ್ರೆಸ್. ಕರ್ನಾಟಕ ಕಾಂಗ್ರೆಸ್ ಈಗ ಮಾಡಿಕೊಂಡ ಪ್ಲಾನ್ ಪ್ರಕಾರ, ಶೀಘ್ರದಲ್ಲೇ ಕಾಂಗ್ರೆಸ್ ನೇತೃತ್ವದಲ್ಲಿ ಹೊಸ ನ್ಯೂಸ್ ಚಾನೆಲ್ ಕನ್ನಡದಲ್ಲಿ ಆರಂಭ ಮಾಡಲು ಚಿಂತನೆ ನಡೆದಿದೆ. ಹಾಗೇ, ಇಂಗ್ಲಿಷ್ ಭಾಷೆಯಲ್ಲೂ ಚಾನೆಲ್ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತೊಂದು ಕಡೆ ನ್ಯೂಸ್ ಪೇಪರ್ ಒಂದನ್ನು ಕರ್ನಾಟಕ ಕಾಂಗ್ರೆಸ್ ವತಿಯಿಂದ ಆರಂಭ ಮಾಡೋದಕ್ಕೆ ಚರ್ಚೆಗಳು ನಡೆದಿವೆಯಂತೆ. ಹೀಗೆ ಕರ್ನಾಟಕ ಕಾಂಗ್ರೆಸ್ ವತಿಯಿಂದ ಸ್ವಂತ ನ್ಯೂಸ್ ಚಾನೆಲ್ ಅಥವಾ ಮಾಧ್ಯಮ ಸಂಸ್ಥೆ ಆರಂಭ ಮಾಡುವ ಬಗ್ಗೆ ನಡೆದಿರುವ ಚಿಂತನೆ ಕುರಿತು ಇದೀಗ, ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಮಾಹಿತಿ ನಿಡಿದ್ದಾರೆ.

ಪ್ಲಾನ್ ಜಾರಿ ಆಗುತ್ತಾ?

ಕನ್ನಡ ನ್ಯೂಸ್ ಚಾನೆಲ್‌ಗಳು ತಮ್ಮ ವಿರುದ್ಧ ಬೇಕು ಅಂತಲೇ ಸುದ್ದಿಯನ್ನ ಮಾಡುತ್ತಿವೆ. ಇದರ ಹಿಂದೆ ಖುದ್ದು ಬಿಜೆಪಿ ನಾಯಕರ & ಜೆಡಿಎಸ್ ನಾಯಕರ ಕುತಂತ್ರವು ಅಡಗಿದೆ ಎಂಬ ಆರೋಪವು ಕರ್ನಾಟಕ ಕಾಂಗ್ರೆಸ್ ನಾಯಕರದ್ದು.

ಇದನ್ನೂ ಓದಿ: ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ಪರಿಸ್ಥಿತಿ ಹೀಗಿದ್ದಾಗಲೇ ಸ್ವಂತ ಮಾಧ್ಯಮ ಸಂಸ್ಥೆ ಆರಂಭ ಮಾಡಿ ಬಿಜೆಪಿ & ಜೆಡಿಎಸ್ ನಾಯಕರ ವಿರುದ್ಧ ತೊಡೆ ತಟ್ಟುವ ಐಡಿಯಾ ಕರ್ನಾಟಕ ಕಾಂಗ್ರೆಸ್ ನಾಯಕರದ್ದಾಗಿದೆ. ಆದರೆ, ಈ ಪ್ಲಾನ್ ಯಾವಾಗ ಜಾರಿ ಆಗುತ್ತೆ? ಅಥವಾ ಜಾರಿ ಆಗುವ ಮೊದಲೇ ಐಡಿಯಾ ಮುಗಿದು ಹೋಗುತ್ತಾ? ಎಂಬುದು ಕುತೂಹಲ ಮೂಡಿಸಿದೆ.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ