ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
Latest News
58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ
ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ
ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ
ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ
ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ
ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ
ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು
S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್ಓಗಳು,ಮೇಲ್ವಿಚಾರಕರು,ಬಿಎಲ್ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್ಆಯ್ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ







