ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
Latest News
ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು
ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್ಮೇಲ್ ಆರೋಪ
ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ
ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ
ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ
ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ
ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು
ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ
ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ
ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!
ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ ವಾರ್ಡ ಸಂಖ್ಯೆ 11ರಲ್ಲಿ ಮೂವರು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ.ಪಿಲೇಕೆಮ್ಮ ನಗರದ ಐದು ವರ್ಷದ ಉಲ್ಲಾಸ್ ಹಂಡರಗಲ್ಗೆ ದೇಹದ ಎದೆಯ ಮೇಲ್ಭಾಗದಲ್ಲಿ ಕಚ್ಚಿದ್ದು ವಾರ್ಡನ ಇನ್ನಿಬ್ಬರು ಮಕ್ಕಳಿಗೂ ಕಚ್ಚಿ ಗಾಯಗೊಳಿಸಿದೆ ಎಂದು ವಾರ್ಡನ ಮುಖಂಡ ಮೊಹ್ಮದಅಜರುದ್ದೀನ ಮೂಲಿಮನಿ ತಿಳಿಸಿದ್ದಾರೆ. ಬೀದಿ ನಾಯಿ ಕಚ್ಚಿದ ಕೂಡಲೇ ಮಕ್ಕಳನ್ನು ಸರಕಾರಿ ಆಸ್ಪತ್ರೆಗೆ







