ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.

Latest News

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಯಶಸ್ಸು ಸಾಧ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು. ಪಟ್ಟಣದ ವಿದ್ಯಾಚೇತನ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿರುವ ಸೂಕ್ತವಾದ ಪ್ರತಿಭೆಯನ್ನು ಗುರುತಿಸಿ ಪೂರಕವಾದ ಶೈಕ್ಷಣಿಕ ವಾತಾವರಣ ಸೃಷ್ಟಿಸಬೇಕು. ಶಿಕ್ಷಕರು ಮಗುವಿನ ಮೌಲ್ಯಮಾಪನ ಕಾರ್ಯ ನಿರಂತರ ಮಾಡಬೇಕು ಎಂದರು. ಕುAಟೋಜಿ