ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
Latest News
ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್
ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್
4 ತಿಂಗಳ ಗರ್ಭಿಣಿ ಆತ್ಮಹತ್ಯೆ..!
ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು
ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ
ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ
ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು
ಎಸ್.ಎಸ್.ಎಲ್.ಸಿ ಟಾಪರ್’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ
ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್
SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ್ಯಾಂಕ್
ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ







