ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
Latest News
ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ
ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04
ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ
ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ
ಕೆಬಿಜೆಎನ್ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’
ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ
ಬಿಎಚ್ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್ಗೆ ಮನವಿ
ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್ಇಓ) ಹಾಗೂ ಪದವೀಧರ ಪ್ರಾಥಮಿಕ
ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ
ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12
ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್ಲೆಸ್ ಜಾಬ್ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್
ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್







