ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
Latest News
‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’
ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ
ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್
ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ
ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ
ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ
ಮುದ್ದೇಬಿಹಾಳ ;ಅಂಜುಮನ್ಗೆ 92.95% ರಷ್ಟು ಮತದಾನ
ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ
ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು ಸರ್ಕಾರದ ಹೆಸರಿಗೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ದೇವರ ದಯೆಯಿಂದ ಮಹಾರಾಷ್ಟçದಲ್ಲಿ ಮಳೆಯಾಗಿ ಆಲಮಟ್ಟಿ ಡ್ಯಾಂಗೆ ನೀರು ಬಂದಿದೆ. ಕುಡಿಯಲು, ಜಾನುವಾರುಗಳಿಗೆ,ಸ್ವಲ್ಪ ಬೆಳೆಗಳಿಗೆ ಬಳಸಿಕೊಳ್ಳಲು ಅನುಕೂಲವಾಗಿದೆ.ಆದರೆ ಕೆಲವರು ನೆಪಕ್ಕೋಸ್ಕರ ಆಡಳಿತ
ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್
ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ ಮಾರ್ಗದರ್ಶನ ಸಿಬ್ಬಂದಿ ವರ್ಗದವರ ನಿರಂತರ ಪರಿಶ್ರಮದಿಂದ ಬ್ಯಾಂಕಿಗೆ 1.15 ಕೋಟಿ ರೂ.ಲಾಭ ಗಳಿಸಿದೆ ಎಂದು ನಾಲತವಾಡದ ಶ್ರೀ ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಎಂ.ಎಸ್.ಪಾಟೀಲ ಹೇಳಿದರು. ಇಲ್ಲಿಯ ರತ್ನ ಸಂಗಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಸಂಘದ 30ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು ಸುಮಾರು ಇಲ್ಲಿಯವರೆಗೆ







