ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
Latest News
ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ
ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ
ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ
ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು
ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ
ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ
ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ
ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ
‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’
ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು
ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ
ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ, ಜ್ಞಾನ ಗಂಗೋತ್ರಿ ಶಾಲೆಯ ಎಂ.ಬಿ.ನದಾಫ, ತಂಗಡಗಿಯ ಚರಲಿಂಗೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಲ್.ಮಾದರ , ಸಂಜೀವ ಜಾಲವಾದಿ ಉಪಸ್ಥಿತರಿದ್ದರು.







