ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.

Latest News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.