ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.

Latest News

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:                                                                                                                                                           ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು ಗ್ರಾಮದೇವತೆ ಶ್ರೀ ಗದ್ಯಮದೇವಿ ದೇವಸ್ಥಾನದಿಂದ ಪ್ರಾರಂಭಿಸಿದರು. ಪ್ರತಿ ವರ್ಷದಂತೆ ಈ ವರ್ಷ ಸೇರಿ 23ನೇ ವರ್ಷ ಪಾದಯಾತ್ರೆ ಇದಾಗಿದ್ದು ಈ ಪಾದಯಾತ್ರೆಯಲ್ಲಿ ಮಾರನಾಳ ಊರಿನ ಗುರು ಹಿರಿಯರು ಯುವಕರು ಹಾಗೂ ಮಹಿಳೆಯರು ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಯು ಸರಿ-ಸುಮಾರು 120 ಕಿಲೋ ಮೀಟರ್ ನಷ್ಟು ದೂರವಿದ್ಧಿ ಆದರೂ ಸಹಾ ಮಳೆ, ಗಾಳಿ, ಚಳ್ಳಿ,

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು. ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ ಪೃಥ್ವಿ ನಾಡಗೌಡ, ಅಪ್ಪು ನಾಡಗೌಡ, ಮಲ್ಲಿಕಾರ್ಜುನ ನಾಡಗೌಡ ಇದ್ದರು.