ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.

Latest News

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ 2019-2026ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ