ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.

ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ
Latest News
ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ
ಬಾಗಲಕೋಟೆ: ಎರಡು ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು
ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ
ಬಾಗಲಕೋಟೆ: ಎರಡು ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು
ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ
ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ
ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ
ಮುದ್ದೇಬಿಹಾಳ : ಕೆಬಿಜೆಎನ್ಎಲ್ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ
ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ
ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ
ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.
ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ