ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.
ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಪಟಾಕಿ ಬೇಡ, ದೀಪ ಬೆಳಗೋಣ” ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ, ದೊಡ್ಡ ಶಬ್ದ ಮಾಡುವ ಪಟಾಕಿಗಳಿಂದ ಮನುಷ್ಯನಿಗೆ, ಪ್ರಾಣಿ, ಪಕ್ಷಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಪಟಾಕಿಗಳಿಂದ ಹೊರಹೊಮ್ಮುವ ವಿಷಾನಿಲಗಳು ಶ್ವಾಸಕೋಶದ ರೋಗಗಳು ಮತ್ತು ಕ್ಯಾನ್ಸರನಂತಹ ಗಂಭೀರ ಖಾಯಿಲೆಗಳು ಬರುತ್ತವೆ. ಜೊತೆಗೆ ಮಕ್ಕಳು ಪಟಾಕಿ ಹೊಡೆಯುವ ಸಮಯದಲ್ಲಿ ಕೈ, ಕಣ್ಣು ಸೇರಿದಂತೆ ಜೀವ ಕಳೆದುಕೊಂಡ ಘಟನೆಗಳನ್ನು ನೋಡುತ್ತಿದ್ದೇವೆ. ಇದು ತಪ್ಪಬೇಕೆಂದರೆ ಪಟಾಕಿ ಹೊಡೆಯುವ ಬಗ್ಗೆ, ಅದರ ಅಪಾಯಗಳ ಬಗ್ಗೆ ಅರಿಯಬೇಕು ಎಂದರು.
ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಪಟಾಕಿ ಸಿಡಿಸುವುದು ಎಂದರೆ ಶ್ರಮಪಟ್ಟು ದುಡಿದ ಲಕ್ಷಾಂತರ ಹಣಕ್ಕೆ ಬೆಂಕಿ ಹಚ್ಚುವುದಕ್ಕೆ ಸಮ. ಈ ಭೂಮಿಯ ಮೇಲೆ ಬದುಕುವ ಹಕ್ಕು ನಮಗಿರುವಷ್ಟೇ ಪ್ರಾಣಿ, ಪಕ್ಷಿಗಳಿಗೂ ಇದೆ. ನಮ್ಮ ಆಶೆ ಆಕಾಂಕ್ಷೆಗಳನ್ನು ನಿಯಂತ್ರಿಸುವ ಕೆಲಸ ನಡೆಯಬೇಕು ಎಂದರು.
ತಾಲ್ಲೂಕು ಕುರುಬರ ಸಂಘದ ನಿರ್ದೇಶಕ ನಾಗಪ್ಪ ರೂಢಗಿ, ಹಸಿರು ತೋರಣ ಗೆಳೆಯರ ಬಳಗದ ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ, ಕಾರ್ಯದರ್ಶಿ ಬಿ.ಎಚ್.ಬಳಬಟ್ಟಿ, ಉಪಾಧ್ಯಕ್ಷ ಬಸವರಾಜ ಬಿಜ್ಜೂರ, ವೀರಶೈವ ಮಹಾಸಭಾ ಅಧ್ಯಕ್ಷ ವೆಂಕನಗೌಡ ಪಾಟೀಲ, ಸದಸ್ಯರಾದ ಸುರೇಶ ಕಲಾಲ, ಸೋಮಶೇಖರ ಚೀರಲದಿನ್ನಿ, ಪ್ರೌಢಶಾಲೆಯ ಮುಖ್ಯ ಗುರು ಬಿ.ಎಸ್.ಫಣೇದಕಟ್ಟಿ, ಶಿಕ್ಷಕರಾದ ಆರ್.ಜಿ.ಮೆಣಸಗಿ, ಎಸ್.ಎನ್.ಸಜ್ಜನ, ಆರ್.ವೈ.ಪಾಟೀಲ, ಆರ್.ಎಸ್.ವಾಲಿಕಾರ, ಲಕ್ಷ್ಮೀ ಗುಬಚಿ, ಲತಾ ಮೇಟಿ, ಬಸಮ್ಮ ಬರದೇನಾಳ, ಜಿ.ಎಂ.ಹುಲಗಣ್ಣಿ, ಮತ್ತಿತರರು ಇದ್ದರು. ಮಾಣಿಕ್ಯಮ್ಮ ತಡಸದ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಎಂ.ಎನ್.ಯರಝರಿ ಸ್ವಾಗತಿಸಿದರು. ಎಂ.ಸಿ.ಕಬಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿ, ವಂದಿಸಿದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ