‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ ಕೊಟ್ಟಿದ್ದರು.ಆದರೆ ನಿಜವಾಗಿಯೂ ಈ ದೇಶವನ್ನು ಕಾಯುವವರು ರೈತರ ಮಕ್ಕಳೇ ಹೊರತು ಸಿರಿವಂತರ ಮಕ್ಕಳಲ್ಲ.ದೇಶದಲ್ಲಿ ಬದಲಾವಣೆ ಆಗಿರುವುದು ಬಡವರ ಮಕ್ಕಳಿಂದ ಆಗಿದೆಯೇ ಹೊರತು ಸಿರಿವಂತರು,ದೊಡ್ಡವರ ಮಕ್ಕಳಿಂದಲ್ಲ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಸಂಜೆ ನೌಕಾಸೇನೆಯ ನಿವೃತ್ತ ಯೋಧ ಸತೀಶ ನಾಯಕ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವವರು ಸೈನಿಕರು ಮಾತ್ರ.ಅವರು ತೊಟ್ಟಿರುವ ಸಮವಸ್ತç ಶೌರ್ಯ,ತ್ಯಾಗದ ಗುರುತು ಆಗಿದೆ. ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋಗಳನ್ನು ಹಾಕುವ ಬದಲಾಗಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರಸೈನಿಕರ ಫೋಟೋಗಳನ್ನು ಶಾಲೆಗಳಲ್ಲಿ,ಕಚೇರಿಗಳಲ್ಲಿ ಹಾಕುವ ಪದ್ದತಿ ರೂಢಿಯಲ್ಲಿ ಬರಬೇಕು.ಸರ್ಕಾರ ಅಂತಹ ನಿಯಮ ಜಾರಿಗೆ ತರಬೇಕು.ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಲ್ಲಿ 200 ಅಡಿ ಎತ್ತರದ ರಾಷ್ಟçಧ್ವಜದ ಸ್ತಂಭವನ್ನು ಸ್ಥಾಪಿಸಲು ಉದ್ಧೇಶವಿದ್ದು ಅಲ್ಲಿ ರಾಷ್ಟçಧ್ವಜ ನಿತ್ಯವೂ ಹಾರಾಡುವಂತೆ ನಾವೆಲ್ಲ ಕೈಜೋಡಿಸಬೇಕು.ಇದಕ್ಕೆ ಜನಪ್ರತಿನಿಧಿಗಳ ಸಹಕಾರವೂ ಅವಶ್ಯವಿದೆ ಎಂದು ಹೇಳಿದರು.

ಎಸ್.ಎಸ್.ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ರವಿ ನಾಯಕ ಮಾತನಾಡಿ, ದೇಶದಲ್ಲಿ ನೆಮ್ಮದಿಯಿಂದ ನಿದ್ದೆ ಮಾಡಲು ಕಾರಣ ಈ ದೇಶದ ಯೋಧರು ಜೀವ ಒತ್ತೆ ಇಟ್ಟು ಕಾಯುತ್ತಿರುವ ಕಾರಣ ದೇಶದಲ್ಲಿ ಸುರಕ್ಷತೆಯಿಂದ ಇದ್ದೇವೆ.ಸೈನ್ಯದಲ್ಲಿ ಜಾತಿ,ಸಮುದಾಯ ಎಂಬುದಿಲ್ಲ. ನಿವೃತ್ತಿಗೊಂಡು ತವರಿಗೆ ಮರಳುವ ಸೈನಿಕರನ್ನು ಸಮಾಜದಲ್ಲಿ ಎಲ್ಲರೂ ಒಗ್ಗೂಡಿ ಸಾರ್ವತ್ರಿಕವಾಗಿ ಗೌರವಿಸುವ ಕಾರ್ಯ ಆಗಬೇಕು ಎಂದರು.

ನೌಕಾಸೇನಾ ನಿವೃತ್ತ ಯೋಧ ಸತೀಶ ನಾಯಕ ಮಾತನಾಡಿ, ಸೈನಿಕ ದೇಶ ಸೇವೆ ಒಬ್ಬನೇ ಮಾಡುವುದಿಲ್ಲ.ಆತನ ಹಿಂದೆ ಊರು,ಕುಟುಂಬ, ಸಮಾಜವಿರುತ್ತದೆ.ನಿಮ್ಮ ಬೆಂಬಲ ಇಲ್ಲದೇ ಸೇನೆಯಲ್ಲಿ ಸೇವೆ ಸಲ್ಲಿಸಲು ಆಗುತ್ತಿರಲಿಲ್ಲ.ನೌಕಾಸೇನೆಯಲ್ಲಿ ಸೇವೆ ಸಲ್ಲಿಸುವವರು ಎಂದರೆ ಕೇವಲ ಯೂನಿಫಾರಂ ಧರಿಸುವುದಲ್ಲ.ಪ್ರಮಾಣಿಕ,ಶಿಸ್ತು,ದಕ್ಷತೆಯಿಂದ ಸೇವೆ ಸಲ್ಲಿಸಬೇಕು.ದೇಶಕ್ಕೆ ಸೇವೆ ಸಲ್ಲಿಸುವುದು ಜೀವನವನ್ನು ರೂಪಿಸುವ ಪವಿತ್ರ ಮಾರ್ಗವಾಗಿದೆ.ದೇಶಕ್ಕೆ ಸೇವೆ ಸಲ್ಲಿಸುವ ಅವಕಾಶ ಬಂದರೆ ಅದನ್ನು ಖುಷಿಯಿಂದ ಸ್ವೀಕರಿಸಿ ಎಂದು ಹೇಳಿದರು.

ತಹಶೀಲ್ದಾರ್ ಕೀರ್ತಿ ಚಾಲಕ್, ಜಿಪಂ ಮಾಜಿ ಸದಸ್ಯ ಗಂಗಾಧರರಾವ ನಾಡಗೌಡ,ಬಿಎಸ್‌ಎಫ್‌ಗೆ ಆಯ್ಕೆಯಾದ ಹುಲ್ಲೂರಿನ ಕಾಶೀಬಾಯಿ ಚಲವಾದಿ ಮಾತನಾಡಿದರು.

ಮುದ್ದೇಬಿಹಾಳ-ಹುನಗುಂದ ಹೊಸಮಠ-ಗಚ್ಚಿನಮಠದ ಅಮರೇಶ್ವರ ದೇವರು ಸಾನಿಧ್ಯ ವಹಿಸಿದ್ದರು.ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ ಅಧ್ಯಕ್ಷತೆ ವಹಿಸಿದ್ದರು.ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿ ಅಧ್ಯಕ್ಷ ಶ್ರೀಕಾಂತ ಹಿರೇಮಠ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ,ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ಆಯ್.ಹಿರೇಮಠ,,ಪಿಎಸ್‌ಐ ಸಂಜಯ ತಿಪರೆಡ್ಡಿ,ಇಲಕಲ್‌ನ ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿಜಯ ದಳವಾಯಿ, ಈರಪ್ಪ ನರಗುಂದ, ಬಿಜೆಪಿ ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ,ಮುಖoಡ ಸೋಮನಗೌಡ ಪಾಟೀಲ ನಡಹಳ್ಳಿ, ಮಾಜಿ ಸೈನಿಕ ರೇವಣೆಪ್ಪ ಹರಿಜನ,ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ, ಬಿಜೆಪಿ ನಾಯಕಿ ಗೌರಮ್ಮ ಹುನಗುಂದ ಮೊದಲಾದವರು ಇದ್ದರು.ಟಿ.ಡಿ.ಲಮಾಣಿ ಹಾಗೂ ಜಿ.ಎಚ್.ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು.ತಾಲ್ಲೂಕು ಆಡಳಿತದಿಂದ ತಹಶೀಲ್ದಾರ್ ಕೀರ್ತಿ ಚಾಲಕ , ಗ್ರಾಮ ಆಡಳಿತ ಅಧಿಕಾರಿ ಮನೋಜ ರಾಠೋಡ ನಿವೃತ್ತ ಯೋಧ ಸತೀಶ ನಾಯಕ ಅವರಿಗೆ ಸನ್ಮಾನಿಸಿದರು.ಬಿಎಸ್‌ಎಫ್‌ಗೆ ಆಯ್ಕೆಗೊಂಡ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಹಾಗೂ ಹುಲ್ಲೂರಿನ ಕಾಶೀಬಾಯಿ ಚಲವಾದಿ ಅವರನ್ನು ಸನ್ಮಾನಿಸಲಾಯಿತು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,