ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಮೈಸೂರು: ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣನ ಮೇಲೆ ಕೇಸ್ ಆಗುವಂತೆ ಮಾಡಿದ್ದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar in Janandolana) ಅವರು ಗಂಭೀರ ಆರೋಪ ಮಾಡಿದರು.

Join Our Telegram: https://t.me/dcgkannada

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರ ಮೈಸೂರು ಚಲೋ ಪಾದಯಾತ್ರೆ ವಿರುದ್ಧ ಟಕ್ಕರ್ ಕೊಡಲು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡ ಜನಾಂದೋಲನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ ವಿಚಾರದಲ್ಲಿ ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಹಾಗೂ ನನ್ನ ಕೈವಾಡವಿದೆ ಅಂತಾ ಕುಮಾರಸ್ವಾಮಿ ಹೇಳ್ತಾರೆ. ಅವರ ಪಾದಯಾತ್ರೆಯಲ್ಲಿ ಪ್ರೀತಂಗೌಡ ವಿರುದ್ಧ ಜೆಡಿಎಸ್ ಬೆಂಬಲಿಗರು ಕಿರಿಕ್ ಮಾಡ್ತಾರೆ. ನನ್ನ ವಿರುದ್ಧ ಪೆನ್‌ಡ್ರೈವ್ ವಿಚಾರ ಯಾಕೆ ಮಾಡ್ತೀರಿ ಕುಮಾರಣ್ಣ ಎಂದು ಪ್ರಶ್ನಿಸಿದರು. ತನ್ನ ಮಗನಿಗೆ ತೊಂದರೆ ಆಗದಿರಲಿ ಅಂತಾ ಇನ್ನೊಬ್ಬರ ಮಗನ ಮೇಲೆ ನೀವು ಮಾಡಿರುವ ಷಡ್ಯಂತ್ರ ಎಂದು ಡಿಕೆ ಶಿವಕುಮಾರ್ ( DK Shivakumar in Janandolana) ಅವರು ಗಂಭೀರ ಆರೋಪ ಮಾಡಿದರು.

ಕುಮಾರಸ್ವಾಮಿ ಅವರು ತಮ್ಮ ಕುಟುಂಬಕ್ಕೆ ತೊಂದರೆ ಆದರೆ ಯಾರನ್ನು ಬಿಡಲ್ಲ. ಇನ್ನು ನನ್ನ ಹಾಗೂ ಸಿಎಂ ಅವರನ್ನು ಬಿಡಲು ಸಾಧ್ಯವೇ ಎಂದು ವ್ಯಂಗ್ಯವಾಡಿದರು. ಓರ್ವ ಹಿಂದುಳಿದ ನಾಯಕ ಸಿಎಂ ಆಗಿದ್ದು ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ. ಈ ಬಂಡೆ ಜೊತೆ 136 ಜನ ಶಾಸಕರಿದ್ದಾರೆ. ನಮಗೆ ಮತ ನೀಡಿದ 1 ಕೋಟಿ 80 ಲಕ್ಷ ಮತದಾರರು ಸಿದ್ದರಾಮಯ್ಯನವರ ಜೊತೆಗಿದ್ದಾರೆ. ಇದನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಜೆಡಿಎಸ್ ಮತ್ತು ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದರು.

ಇದನ್ನೂ ಓದಿ: ಇವರ ಷಡ್ಯಂತ್ರಕ್ಕೆ ಬಲಿಯಾಗಲ್ಲ; ಇದನ್ನೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ

ಅಂದು ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ್ವಿ. ಗಣಿಧಣಿಗಳ ವಿರುದ್ಧ ಪಾದಯಾತ್ರೆ ಮಾಡಿದ್ವಿ. ಕ್ವಿಟ್ ಇಂಡಿಯಾ ಮೂಮೆಂಟ್ ದಿನ ಬಳ್ಳಾರಿಯಲ್ಲಿ ಸಮಾವೇಶ ಮಾಡಿದ್ವಿ. ಇಂದು ಜೆಡಿಎಸ್-ಬಿಜೆಪಿ ವಿರುದ್ಧ ಸಂವಿಧಾನ ಉಳಿಸಲು ಹೋರಾಟ. ಬಡವರ ಪರವಾದ ಸರ್ಕಾರ ಉಳಿಸಲು, ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ಬಿಜೆಪಿ – ಜೆಡಿಎಸ್​ ಮಾಡ್ತಿರೋದು ಪಾಪ ವಿಮೋಚನಾ ಯಾತ್ರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರ ನಾಯಕತ್ವ, ನನ್ನ ಅಧ್ಯಕ್ಷತೆಯಲ್ಲಿ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ತೆಗೆಯಲು ಹುನ್ನಾರ ನಡೆಯುತ್ತಿದೆ. ಬಡವರಿಗೆ ಗ್ಯಾರಂಟಿ ಕೊಟ್ಟು, ಬಡವರ ರಕ್ಷಣೆಗಾಗಿ ನಾವು ಹೋರಾಟ ಮಾಡ್ತಿದ್ದೇವೆ. ಮಿಸ್ಟರ್ ಕುಮಾರಸ್ವಾಮಿ, ಅಶೋಕ್​, ವಿಜಯೇಂದ್ರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದರು. ಕುಮಾರಸ್ವಾಮಿ ನೀನು ಗೆದ್ದಿರೋದು 19 ಸೀಟು ಅಷ್ಟೇ. ನಿನಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ?. ಹೇ ಅಶೋಕಾ, ವಿಜಯೇಂದ್ರ ನಿಮಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ ಎಂದು ಡಿಕೆಶಿ ( DK Shivakumar in Janandolana) ಪ್ರಶ್ನಿಸಿದರು.

10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರ ಮುಟ್ಟಲಾಗದು: 2023ರಲ್ಲಿ ರಾಜ್ಯದ ಜನರು ನಮಗೆ ಶೇ. 43ರಷ್ಟು ಮತ ನೀಡಿದ್ದಾರೆ, ಲೋಕಸಭೆಯಲ್ಲಿ ಶೇ.45ರಷ್ಟು ಮತ ನೀಡಿದ್ದಾರೆ. 1 ಸೀಟು ಹೊಂದಿದ್ದ ನಾವು 9 ಸೀಟು ಗೆದ್ದಿದ್ದೇವೆ. ಜನರ ತೀರ್ಪನ್ನು ನಾವು ಒಪ್ಪುತ್ತೇವೆ. ಈ ಸರ್ಕಾರವನ್ನು ಮುಂದಿನ 10 ತಿಂಗಳಲ್ಲಿ ಅಲ್ಲಾಡಿಸಬಹುದು ಎಂಬುದು ನಿಮ್ಮ ಭ್ರಮೆ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮುಂದಿನ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ. ಮುಡಾ ಹಗರಣ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸಿಎಂ ರಾಜೀನಾಮೆ ಕೇಳುತ್ತಿರುವುದು ಅನೈತಿಕ ಎಂದು ಹೇಳಿದರು.

ಮುಡಾ ಅಕ್ರಮದಲ್ಲಿ ಶ್ರೀಮತಿ ಪಾರ್ವತಿ ಹಾಗೂ ಸಿದ್ದರಾಮಯ್ಯ ಅವರ ತಪ್ಪೇನಿದೆ?. ಇಲ್ಲಿ ಅಕ್ರಮ ಏನು ನಡೆದಿದೆ? ಸಿದ್ದರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರಿಗೆ ಅವರ ಸಹೋದರ ಖರೀದಿ ಮಾಡಿದ ಜಮೀನನ್ನು ಅರಿಶಿನ ಕುಂಕುಮಕ್ಕೆ ಉಡುಗೊರೆಯಾಗಿ ನೀಡಿದ್ದರು. ಆ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಪರಿಣಾಮ ಅವರು ಪರಿಹಾರ ಅರ್ಜಿ ಸಲ್ಲಿಸಿದ್ದರು ಎಂದರು.

ನಾನಾಗಿದ್ದರೆ ಶೇ.100ರಷ್ಟು ಪರಿಹಾರ ನೀಡಿ ಎಂದು ಹೋರಾಟ ಮಾಡುತ್ತಿದ್ದೆ. ಆದರೆ ಪಾರ್ವತಿ ಅವರು ಮುಡಾದವರು 50:50 ಅನುಪಾತದಲ್ಲಿ ಪರಿಹಾರ ಪಡೆಯಲು ಒಪ್ಪಿದರು. ಅವರು ಪರಿಹಾರದ ಅರ್ಜಿ ಹಾಕುವಾಗ ಇಂತಹುದೇ ಜಾಗದಲ್ಲಿ ಪರಿಹಾರ ನೀಡಿ ಎಂದು ಕೇಳಿಲ್ಲ. ಮುಡಾದವರು ತಮ್ಮ ತಪ್ಪಿನ ಅರಿವಾಗಿ ಒಂದು ನಿರ್ಣಯಕ್ಕೆ ಬಂದು ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರು ನನ್ನ ಪತ್ನಿಗೆ ನಿವೇಶನ ನೀಡಿ ಎಂದು ಒತ್ತಡ ಹಾಕಿದ್ದಾರಾ? ಆದೇಶ ಮಾಡಿದ್ದಾರಾ? ಅಧಿಕಾರ ದುರುಪಯೋಗ ಮಾಡಿದ್ದಾರಾ? ಇಲ್ಲ. ಆದರೂ ಇದನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಏಕೆ ಅಕ್ರಮ ಎಂದು ಕರೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ