ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಮೈಸೂರು: ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣನ ಮೇಲೆ ಕೇಸ್ ಆಗುವಂತೆ ಮಾಡಿದ್ದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar in Janandolana) ಅವರು ಗಂಭೀರ ಆರೋಪ ಮಾಡಿದರು.

Join Our Telegram: https://t.me/dcgkannada

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರ ಮೈಸೂರು ಚಲೋ ಪಾದಯಾತ್ರೆ ವಿರುದ್ಧ ಟಕ್ಕರ್ ಕೊಡಲು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡ ಜನಾಂದೋಲನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ ವಿಚಾರದಲ್ಲಿ ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಹಾಗೂ ನನ್ನ ಕೈವಾಡವಿದೆ ಅಂತಾ ಕುಮಾರಸ್ವಾಮಿ ಹೇಳ್ತಾರೆ. ಅವರ ಪಾದಯಾತ್ರೆಯಲ್ಲಿ ಪ್ರೀತಂಗೌಡ ವಿರುದ್ಧ ಜೆಡಿಎಸ್ ಬೆಂಬಲಿಗರು ಕಿರಿಕ್ ಮಾಡ್ತಾರೆ. ನನ್ನ ವಿರುದ್ಧ ಪೆನ್‌ಡ್ರೈವ್ ವಿಚಾರ ಯಾಕೆ ಮಾಡ್ತೀರಿ ಕುಮಾರಣ್ಣ ಎಂದು ಪ್ರಶ್ನಿಸಿದರು. ತನ್ನ ಮಗನಿಗೆ ತೊಂದರೆ ಆಗದಿರಲಿ ಅಂತಾ ಇನ್ನೊಬ್ಬರ ಮಗನ ಮೇಲೆ ನೀವು ಮಾಡಿರುವ ಷಡ್ಯಂತ್ರ ಎಂದು ಡಿಕೆ ಶಿವಕುಮಾರ್ ( DK Shivakumar in Janandolana) ಅವರು ಗಂಭೀರ ಆರೋಪ ಮಾಡಿದರು.

ಕುಮಾರಸ್ವಾಮಿ ಅವರು ತಮ್ಮ ಕುಟುಂಬಕ್ಕೆ ತೊಂದರೆ ಆದರೆ ಯಾರನ್ನು ಬಿಡಲ್ಲ. ಇನ್ನು ನನ್ನ ಹಾಗೂ ಸಿಎಂ ಅವರನ್ನು ಬಿಡಲು ಸಾಧ್ಯವೇ ಎಂದು ವ್ಯಂಗ್ಯವಾಡಿದರು. ಓರ್ವ ಹಿಂದುಳಿದ ನಾಯಕ ಸಿಎಂ ಆಗಿದ್ದು ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ. ಈ ಬಂಡೆ ಜೊತೆ 136 ಜನ ಶಾಸಕರಿದ್ದಾರೆ. ನಮಗೆ ಮತ ನೀಡಿದ 1 ಕೋಟಿ 80 ಲಕ್ಷ ಮತದಾರರು ಸಿದ್ದರಾಮಯ್ಯನವರ ಜೊತೆಗಿದ್ದಾರೆ. ಇದನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಜೆಡಿಎಸ್ ಮತ್ತು ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದರು.

ಇದನ್ನೂ ಓದಿ: ಇವರ ಷಡ್ಯಂತ್ರಕ್ಕೆ ಬಲಿಯಾಗಲ್ಲ; ಇದನ್ನೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ

ಅಂದು ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ್ವಿ. ಗಣಿಧಣಿಗಳ ವಿರುದ್ಧ ಪಾದಯಾತ್ರೆ ಮಾಡಿದ್ವಿ. ಕ್ವಿಟ್ ಇಂಡಿಯಾ ಮೂಮೆಂಟ್ ದಿನ ಬಳ್ಳಾರಿಯಲ್ಲಿ ಸಮಾವೇಶ ಮಾಡಿದ್ವಿ. ಇಂದು ಜೆಡಿಎಸ್-ಬಿಜೆಪಿ ವಿರುದ್ಧ ಸಂವಿಧಾನ ಉಳಿಸಲು ಹೋರಾಟ. ಬಡವರ ಪರವಾದ ಸರ್ಕಾರ ಉಳಿಸಲು, ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ಬಿಜೆಪಿ – ಜೆಡಿಎಸ್​ ಮಾಡ್ತಿರೋದು ಪಾಪ ವಿಮೋಚನಾ ಯಾತ್ರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರ ನಾಯಕತ್ವ, ನನ್ನ ಅಧ್ಯಕ್ಷತೆಯಲ್ಲಿ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ತೆಗೆಯಲು ಹುನ್ನಾರ ನಡೆಯುತ್ತಿದೆ. ಬಡವರಿಗೆ ಗ್ಯಾರಂಟಿ ಕೊಟ್ಟು, ಬಡವರ ರಕ್ಷಣೆಗಾಗಿ ನಾವು ಹೋರಾಟ ಮಾಡ್ತಿದ್ದೇವೆ. ಮಿಸ್ಟರ್ ಕುಮಾರಸ್ವಾಮಿ, ಅಶೋಕ್​, ವಿಜಯೇಂದ್ರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದರು. ಕುಮಾರಸ್ವಾಮಿ ನೀನು ಗೆದ್ದಿರೋದು 19 ಸೀಟು ಅಷ್ಟೇ. ನಿನಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ?. ಹೇ ಅಶೋಕಾ, ವಿಜಯೇಂದ್ರ ನಿಮಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ ಎಂದು ಡಿಕೆಶಿ ( DK Shivakumar in Janandolana) ಪ್ರಶ್ನಿಸಿದರು.

10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರ ಮುಟ್ಟಲಾಗದು: 2023ರಲ್ಲಿ ರಾಜ್ಯದ ಜನರು ನಮಗೆ ಶೇ. 43ರಷ್ಟು ಮತ ನೀಡಿದ್ದಾರೆ, ಲೋಕಸಭೆಯಲ್ಲಿ ಶೇ.45ರಷ್ಟು ಮತ ನೀಡಿದ್ದಾರೆ. 1 ಸೀಟು ಹೊಂದಿದ್ದ ನಾವು 9 ಸೀಟು ಗೆದ್ದಿದ್ದೇವೆ. ಜನರ ತೀರ್ಪನ್ನು ನಾವು ಒಪ್ಪುತ್ತೇವೆ. ಈ ಸರ್ಕಾರವನ್ನು ಮುಂದಿನ 10 ತಿಂಗಳಲ್ಲಿ ಅಲ್ಲಾಡಿಸಬಹುದು ಎಂಬುದು ನಿಮ್ಮ ಭ್ರಮೆ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮುಂದಿನ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ. ಮುಡಾ ಹಗರಣ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸಿಎಂ ರಾಜೀನಾಮೆ ಕೇಳುತ್ತಿರುವುದು ಅನೈತಿಕ ಎಂದು ಹೇಳಿದರು.

ಮುಡಾ ಅಕ್ರಮದಲ್ಲಿ ಶ್ರೀಮತಿ ಪಾರ್ವತಿ ಹಾಗೂ ಸಿದ್ದರಾಮಯ್ಯ ಅವರ ತಪ್ಪೇನಿದೆ?. ಇಲ್ಲಿ ಅಕ್ರಮ ಏನು ನಡೆದಿದೆ? ಸಿದ್ದರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರಿಗೆ ಅವರ ಸಹೋದರ ಖರೀದಿ ಮಾಡಿದ ಜಮೀನನ್ನು ಅರಿಶಿನ ಕುಂಕುಮಕ್ಕೆ ಉಡುಗೊರೆಯಾಗಿ ನೀಡಿದ್ದರು. ಆ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಪರಿಣಾಮ ಅವರು ಪರಿಹಾರ ಅರ್ಜಿ ಸಲ್ಲಿಸಿದ್ದರು ಎಂದರು.

ನಾನಾಗಿದ್ದರೆ ಶೇ.100ರಷ್ಟು ಪರಿಹಾರ ನೀಡಿ ಎಂದು ಹೋರಾಟ ಮಾಡುತ್ತಿದ್ದೆ. ಆದರೆ ಪಾರ್ವತಿ ಅವರು ಮುಡಾದವರು 50:50 ಅನುಪಾತದಲ್ಲಿ ಪರಿಹಾರ ಪಡೆಯಲು ಒಪ್ಪಿದರು. ಅವರು ಪರಿಹಾರದ ಅರ್ಜಿ ಹಾಕುವಾಗ ಇಂತಹುದೇ ಜಾಗದಲ್ಲಿ ಪರಿಹಾರ ನೀಡಿ ಎಂದು ಕೇಳಿಲ್ಲ. ಮುಡಾದವರು ತಮ್ಮ ತಪ್ಪಿನ ಅರಿವಾಗಿ ಒಂದು ನಿರ್ಣಯಕ್ಕೆ ಬಂದು ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರು ನನ್ನ ಪತ್ನಿಗೆ ನಿವೇಶನ ನೀಡಿ ಎಂದು ಒತ್ತಡ ಹಾಕಿದ್ದಾರಾ? ಆದೇಶ ಮಾಡಿದ್ದಾರಾ? ಅಧಿಕಾರ ದುರುಪಯೋಗ ಮಾಡಿದ್ದಾರಾ? ಇಲ್ಲ. ಆದರೂ ಇದನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಏಕೆ ಅಕ್ರಮ ಎಂದು ಕರೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು