Not doing iftar party for politics- C.B. Askey

ರಾಜಕೀಯಕ್ಕಾಗಿ ಇಫ್ತಾರ್ ಕೂಟ ಮಾಡುತ್ತಿಲ್ಲ- ಸಿ.ಬಿ.ಅಸ್ಕಿ

ರಾಜಕೀಯಕ್ಕಾಗಿ ಇಫ್ತಾರ್ ಕೂಟ ಮಾಡುತ್ತಿಲ್ಲ- ಸಿ.ಬಿ.ಅಸ್ಕಿ

ನಾಲತವಾಡ : ನಾನು ಕಳೆದ ಹಲವು ವರ್ಷದಿಂದ ನಮ್ಮ ಫೌಂಡೇಶನ್‌ದಿಂದ ಇಫ್ತಾರ್ ಕೂಟಗಳನ್ನು ಮಾಡಿಕೊಂಡು ಬಂದಿದ್ದೇನೆ. ಈ ಸೇವೆ ಯಾವುದೇ ರಾಜಕೀಯಕ್ಕಾಗಿ ಅಲ್ಲ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ. ಬಿ. ಅಸ್ಕಿ ಹೇಳಿದರು.

ನಾಲತವಾಡದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಇಫ್ತಾರ್ ಕೂಟದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಳಿಕೋಟಿ, ಮುದ್ದೇಬಿಹಾಳ, ಕೊಣ್ಣೂರು ಹಾಗೂ ನಾಲತವಾಡದಲ್ಲಿ ಮುಸ್ಲಿಂ ಬಾಂಧವರು ಇಫ್ತಾರ್ ಕೂಟ ನಡೆಸುವುದಕ್ಕೆ ಸಹಕಾರ ನೀಡಿದ್ದಾರೆ. ನಮ್ಮ ಫೌಂಡೇಶನ್‌ದಿಂದ ಜನಸೇವೆ ನಿರಂತರವಾಗಿರುತ್ತದೆ. ಸಮಾಜದಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆ ಸಾರುವುದಕ್ಕೆ ಈ ಇಫ್ತಾರ್ ಕೂಟಗಳನ್ನು ನಡೆಸುತ್ತಿದ್ದೇವೆ ಎಂದರು.

ಅಂಜುಮನ್ ಕಮೀಟಿ ಅಧ್ಯಕ್ಷ ಎಲ್. ಎಚ್. ಅವಟಿ ಮಾತನಾಡಿ, ಹಣ ಎಲ್ಲರ ಬಳಿ ಇದೆ. ಆದರೆ ದಾನ ಗುಣ ಎಲ್ಲರಲ್ಲಿ ಇರುವುದಿಲ್ಲ. ಕೋಮು ಸೌಹಾರ್ದತೆ, ಸಮಾಜ ಸೇವೆ, ದಲಿತರಿಗಾಗಿ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ. ಬಿ. ಅಸ್ಕಿ ಸೇವೆ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮೌಲಾಸಾಬ ರಕ್ಕಸಗಿ, ಮೌಲಾನಾ ಮಹ್ಮದ್‌ಇಸ್ಮಾಯಿಲ್ ಮುಲ್ಲಾ, ಮೌಲಾನಾ ಮಹ್ಮದಗೌಸ ಸಿಕ್ಕಲಗಾರ, ಊರಿನ ಹಿರಿಯರಾದ ಹುಸೇನಸಾಬ ಮೂಲಿಮನಿ, ಅಲ್ಲಾಭಕ್ಷ ಕುಳಗೇರಿ, ಭಾಷಾಸಾಬ ತೆಗ್ಗಿನಮನಿ, ಮಹೆಬೂಬ ಕುಳಗೇರಿ, ಇಬ್ರಾಹಿಂ ಮೂಲಿಮನಿ, ಹಣಮಂತ ಕುರಿ, ಶರಣಪ್ಪ ಸಜ್ಜನ ಹಾಗೂ ಅಸ್ಕಿ ಫೌಂಡೇಶನ್ ಬಳಗದ ಸದಸ್ಯರು ಇದ್ದರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು