PDO Not only the PDO.. the gram president is also responsible

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ನುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳಿಂದ ವರದಿ ಕೇಳಿದೆ.

Join Our Telegram: https://t.me/dcgkannada

ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಹಣ ಕಾಸು (ಲೆಕ್ಕಪತ್ರ ಮತ್ತು ಬಜೆಟ್) ವಿಚಾರಗಳಲ್ಲಿ PDO ಮತ್ತು ಅಧ್ಯಕ್ಷರ ಜಂಟಿ ಸಹಿ ವ್ಯವಸ್ಥೆ ಇದೆ. ಇವರಿಬ್ಬರ ಸಹಿ ಮಾಡಿದ ನಂತರವೇ ಕಾಮಗಾರಿಗಳಿಗೆ ಹಣಮಂಜೂರು ಮಾಡಲಾಗುತ್ತದೆ. ಕೆಲವು ಬಾರಿ ಹಣಕಾಸು ವ್ಯವಹಾರ ದಲ್ಲಿ ಲೋಪವಿದ್ದರೂ ಅನುದಾನ ಬಿಡುಗಡೆಗೆ ಅಧ್ಯಕ್ಷರು ಸಹಿ ಮಾಡುತ್ತಾರೆ. ಆಗ ಪಿಡಿಒ ಏನೂ ಮಾಡಲಾಗದೆ ಮಂಜೂರಾತಿಗೆ ಒಪ್ಪಿಗೆ ಸೂಚಿಸುತ್ತಾರೆ. ಆದರೆ, ಲೆಕ್ಕಪರಿಶೋಧನೆ ವೇಳೆ ಅಕ್ರಮ ಬಯಲಾದಾಗ ಪಿಡಿಒಗಳು ಮಾತ್ರ ಇಲಾಖಾ ವಿಚಾರಣೆ ಎದುರಿಸಬೇಕಾಗುತ್ತದೆ.

ಗ್ರಾಪಂ ಭ್ರಷ್ಟಾಚಾರಕ್ಕೆ ಅಧ್ಯಕ್ಷರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇದರಿಂದ ಬೆಸತ್ತಿರುವ ಕರ್ನಾಟಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘ, ಸಹಿ ಅಧಿಕಾರ ಇರುವ ಜನಪ್ರತಿನಿಧಿಗಳನ್ನೂ ಭ್ರಷ್ಟಾಚಾರದಲ್ಲಿ ತಪ್ಪಿತಸ್ತರು ಎಂದು ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸಂದಿಸಿದ ಸರ್ಕಾರ ಚುನಾಯಿತ ಪ್ರತಿನಿಧಿಗಳಿಗೆ ಮೂಗುದಾರ ಹಾಕಲು ನಿಯಮ ರೂಪಿಸುತ್ತಿದೆ.

ಇದನ್ನೂ ಓದಿ: Mudhol: ಬೇಡರ ಊರಲ್ಲಿ ಮಧ್ಯರಾತ್ರಿ‌ ಧ್ವಜಾರೋಹಣ

ಈ ಕುರಿತು ಜು.30ರಂದು ಕರ್ನಾಟಕ ಪಂಚಾಯತ್‌ರಾಜ್ ಆಯುಕ್ತಾಲಯದ ಎಲ್ಲಾ ಸಿಇಒಗಳಿಗೆ ಸುತ್ತೋಲೆ ಹೊರಡಿಸಿದ್ದು, ಪಿಡಿಒ, ಅಧ್ಯಕ್ಷರು, ಸದಸ್ಯರು ಹಾಗೂ ಎಂಜಿನಿಯರ್ ಮೇಲೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಭಿಪ್ರಾಯ ಕೋರಿದೆ. ನಂತರ ಸರ್ಕಾರ ಅಂತಿಮವಾಗಿ ನಿರ್ಧರಿಸಲಿದೆ.

756 ಪಿಡಿಒ ವಿರುದ್ಧ ಕೇಸ್: ರಾಜ್ಯದಲ್ಲಿರುವ 5,963 ಗ್ರಾಪಂಗಳಲ್ಲಿ 91,437 ಮಂದಿ ಚುನಾಯಿತ ಪ್ರತಿನಿಧಿಗಳಿದ್ದಾರೆ. 5,226 ಪಿಡಿಒಗಳಿದ್ದು, ಈ ಪೈಕಿ ಕಳೆದ 2 ವರ್ಷಗಳಲ್ಲಿ 756 ಪಿಡಿಒಗಳು ಹಗರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಇವರಲ್ಲಿ 125 ಮಂದಿ ಅನಾರೋಗ್ಯ ಹಾಗೂ ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.