PDO Not only the PDO.. the gram president is also responsible

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ನುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳಿಂದ ವರದಿ ಕೇಳಿದೆ.

Join Our Telegram: https://t.me/dcgkannada

ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಹಣ ಕಾಸು (ಲೆಕ್ಕಪತ್ರ ಮತ್ತು ಬಜೆಟ್) ವಿಚಾರಗಳಲ್ಲಿ PDO ಮತ್ತು ಅಧ್ಯಕ್ಷರ ಜಂಟಿ ಸಹಿ ವ್ಯವಸ್ಥೆ ಇದೆ. ಇವರಿಬ್ಬರ ಸಹಿ ಮಾಡಿದ ನಂತರವೇ ಕಾಮಗಾರಿಗಳಿಗೆ ಹಣಮಂಜೂರು ಮಾಡಲಾಗುತ್ತದೆ. ಕೆಲವು ಬಾರಿ ಹಣಕಾಸು ವ್ಯವಹಾರ ದಲ್ಲಿ ಲೋಪವಿದ್ದರೂ ಅನುದಾನ ಬಿಡುಗಡೆಗೆ ಅಧ್ಯಕ್ಷರು ಸಹಿ ಮಾಡುತ್ತಾರೆ. ಆಗ ಪಿಡಿಒ ಏನೂ ಮಾಡಲಾಗದೆ ಮಂಜೂರಾತಿಗೆ ಒಪ್ಪಿಗೆ ಸೂಚಿಸುತ್ತಾರೆ. ಆದರೆ, ಲೆಕ್ಕಪರಿಶೋಧನೆ ವೇಳೆ ಅಕ್ರಮ ಬಯಲಾದಾಗ ಪಿಡಿಒಗಳು ಮಾತ್ರ ಇಲಾಖಾ ವಿಚಾರಣೆ ಎದುರಿಸಬೇಕಾಗುತ್ತದೆ.

ಗ್ರಾಪಂ ಭ್ರಷ್ಟಾಚಾರಕ್ಕೆ ಅಧ್ಯಕ್ಷರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇದರಿಂದ ಬೆಸತ್ತಿರುವ ಕರ್ನಾಟಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘ, ಸಹಿ ಅಧಿಕಾರ ಇರುವ ಜನಪ್ರತಿನಿಧಿಗಳನ್ನೂ ಭ್ರಷ್ಟಾಚಾರದಲ್ಲಿ ತಪ್ಪಿತಸ್ತರು ಎಂದು ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸಂದಿಸಿದ ಸರ್ಕಾರ ಚುನಾಯಿತ ಪ್ರತಿನಿಧಿಗಳಿಗೆ ಮೂಗುದಾರ ಹಾಕಲು ನಿಯಮ ರೂಪಿಸುತ್ತಿದೆ.

ಇದನ್ನೂ ಓದಿ: Mudhol: ಬೇಡರ ಊರಲ್ಲಿ ಮಧ್ಯರಾತ್ರಿ‌ ಧ್ವಜಾರೋಹಣ

ಈ ಕುರಿತು ಜು.30ರಂದು ಕರ್ನಾಟಕ ಪಂಚಾಯತ್‌ರಾಜ್ ಆಯುಕ್ತಾಲಯದ ಎಲ್ಲಾ ಸಿಇಒಗಳಿಗೆ ಸುತ್ತೋಲೆ ಹೊರಡಿಸಿದ್ದು, ಪಿಡಿಒ, ಅಧ್ಯಕ್ಷರು, ಸದಸ್ಯರು ಹಾಗೂ ಎಂಜಿನಿಯರ್ ಮೇಲೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಭಿಪ್ರಾಯ ಕೋರಿದೆ. ನಂತರ ಸರ್ಕಾರ ಅಂತಿಮವಾಗಿ ನಿರ್ಧರಿಸಲಿದೆ.

756 ಪಿಡಿಒ ವಿರುದ್ಧ ಕೇಸ್: ರಾಜ್ಯದಲ್ಲಿರುವ 5,963 ಗ್ರಾಪಂಗಳಲ್ಲಿ 91,437 ಮಂದಿ ಚುನಾಯಿತ ಪ್ರತಿನಿಧಿಗಳಿದ್ದಾರೆ. 5,226 ಪಿಡಿಒಗಳಿದ್ದು, ಈ ಪೈಕಿ ಕಳೆದ 2 ವರ್ಷಗಳಲ್ಲಿ 756 ಪಿಡಿಒಗಳು ಹಗರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಇವರಲ್ಲಿ 125 ಮಂದಿ ಅನಾರೋಗ್ಯ ಹಾಗೂ ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ