NSS Camp Concludes: Community participation is essential for the success of projects - Patil

ಎನ್.ಎಸ್.ಎಸ್ ಶಿಬಿರ ಸಮಾರೋಪ:ಯೋಜನೆಗಳ ಯಶಸ್ವಿಗೆ ಸಮಾಜದ ಸಹಭಾಗಿತ್ವ ಅಗತ್ಯ-ಪಾಟೀಲ್

ಎನ್.ಎಸ್.ಎಸ್ ಶಿಬಿರ ಸಮಾರೋಪ:ಯೋಜನೆಗಳ ಯಶಸ್ವಿಗೆ ಸಮಾಜದ ಸಹಭಾಗಿತ್ವ ಅಗತ್ಯ-ಪಾಟೀಲ್

ಮುದ್ದೇಬಿಹಾಳ : ಸರ್ಕಾರಗಳು ಜಾರಿಗೊಳಿಸುವ ಜನಪರ ಯೋಜನೆಗಳ ಯಶಸ್ವಿಗೆ ಸಮಾಜದ ಸಹಕಾರ ಅತ್ಯಗತ್ಯ ಎಂದು ಹಡಲಗೇರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಸ್. ಎಲ್. ಪಾಟೀಲ್ ಹೇಳಿದರು.

ತಾಲ್ಲೂಕು ಹಡಲಗೇರಿಯಲ್ಲಿ ಮಾದರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹಡಲಗೇರಿ ದತ್ತು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸೇವಾ ಗುಣ ಎನ್. ಎಸ್. ಎಸ್ ಬೆಳೆಸಲು ಸಹಕಾರಿಯಾಗಿದೆ ಎಂದರು. ಶಿಕ್ಷಕ ಎನ್. ಎಚ್. ನಾಯ್ಕೋಡಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಶಿಸ್ತು, ತಾಳ್ಮೆ, ಸಹಬಾಳ್ವೆ ಗುಣಗಳನ್ನು ಬೆಳೆಸುತ್ತದೆ ಎಂದರು.

ಪ್ರಮುಖರಾದ ಹನುಮಂತ ತಳವಾರ, ಮಂಜುಳಾ ಕಟಗೇರಿ, ರೇವಣಸಿದ್ದಪ್ಪ ಅಮ್ಮಣಿ, ಅನಿಲ್‌ಕುಮಾರ್ ಡಿಗ್ಗೆ, ಪ್ರೋ. ಲತಾಶ್ರೀ ಡಿಪಿ, ಪ್ರೋ. ರವಿ ಕಟ್ಟಿಮನಿ, ಚನ್ನಮ್ಮ ಚಿಲಮೂರ, ಶಿವಪ್ರಕಾಶ್ ಗೂಳಿ, ಸಿದ್ದು ಸತ್ಯಗೋಳ ಉಪಸ್ಥಿತರಿದ್ದರು.

Latest News

ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಮುದ್ದೇಬಿಹಾಳ: ವಿಜಯನಗರ ಜಿಲ್ಲೆಯಲ್ಲಿ ಜರುಗಿದ ರಾಜ್ಯ ಕರಾಟೆ ಶಿಕ್ಷಕರ ಸಂಘದ 7ನೇ ಮಹಾಸಭೆ ಕಾರ್ಯಕ್ರಮದಲ್ಲಿ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲ್ಲೂಕು ಮಣಿಕನಾಳ ಗ್ರಾಮದ ಶ್ರೀಶೈಲ ರಾಮಲಿಂಗ ಮುಗಳಕೋಡ(35)ಎಂದು ಗುರುತಿಸಲಾಗಿದೆ. ಜತ್ತ ತಾಲ್ಲೂಕಿನಿಂದ 20ಕ್ಕೂ ಹೆಚ್ಚು ಕಾರ್ಮಿಕರು ಕೇಸಾಪೂರ-ಆಲೂರು ಭಾಗದಲ್ಲಿ ನಡೆದಿರುವ ಕಾಲುವೆ ಮರುನವೀಕರಣ ಕೆಲಸಕ್ಕೆ ಬಂದಿದ್ದರು. ಮಂಗಳವಾರ ಮದ್ಯಾಹ್ನ ಏಕಾಏಕಿ ಆರಂಭವಾದ ಸಿಡಿಲು, ಗುಡುಗಿನಿಂದ ಮಳೆಯಿಂದ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ