Officials joined hands for the success of village deity fair: MLA Nad Gowda

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ ಇದ್ದಂತೆ. ಅಧಿಕಾರಿಗಳು ಜಾತ್ರಾ ಕಮೀಟಿಯವರು ತಿಳಿಸುವ ಕೆಲಸಗಳನ್ನು ಲೋಪವಾಗದಂತೆ ಮಾಡಿಕೊಡಬೇಕು ಎಂದು ತಿಳಿಸಿದರು.

ಎಲ್ಲಕ್ಕಿಂತ ಮುಖ್ಯವಾಗಿ ಪಟ್ಟಣದ ಸ್ವಚ್ಛತೆಗೆ ಮುಖ್ಯಾಧಿಕಾರಿಗಳು ತಮ್ಮ ಸಿಬ್ಬಂದಿ ಮೂಲಕ ಗಮನ ಹರಿಸಬೇಕು. ಆಯ್ದ ಜಾಗೆಗಳಲ್ಲಿ ಚರಂಡಿಗಳು ಬ್ಲಾಕ್ ಆಗದಂತೆ ನೋಡಿಕೊಳ್ಳಬೇಕು. ಕುಡಿವ ನೀರು ಪೂರೈಕೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು. ಮೊಬೈಲ್ ಟಾಯ್ಲೆಟ್ ತೆರೆಯಬೇಕು ಎಂದು ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ ತಿಳಿಸಿದರು.

ಜಾತ್ರೆಗೆ ಸಾವಿರಾರು ಜನ ಆಗಮಿಸುವುದರಿಂದ ಸಂಚಾರದ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಸಾಧ್ಯವಾದರೆ ಜಾತ್ರೆಯಲ್ಲಿ ಒಂದು ತಾತ್ಕಾಲಿಕ ಪೊಲೀಸ್ ಚೌಕಿ ಆರಂಭಿಸಬೇಕು. ಜಾತ್ರೆಯ ಹಿಂದಿನ ದಿನದಿಂದ ಜಾತ್ರೆ ಮುಗಿಯವರೆಗೂ ಏಕಮುಖ ಸಂಚಾರ ಮುಖ್ಯರಸ್ತೆಯಲ್ಲಿ ಕೈಗೊಳ್ಳಬೇಕು. ಬಸವೇಶ್ವರ ವೃತ್ತ ಹಾಗೂ ಇಂದಿರಾ ವೃತ್ತದಲ್ಲಿ ಬ್ಯಾರಿಕೇಡ್ ಹಾಕಿ ಭಾರಿ ಪ್ರಮಾಣದ ವಾಹನಗಳ ಸಂಚಾರ ನಿಷೇಧಿಸಬೇಕು ಎಂದು ಸಿಪಿಐ ಮೊಹ್ಮದ ಫಸೀವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ ಅವರಿಗೆ ಸೂಚಿಸಿದರು.

ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯನ್ನು ಒದಗಿಸುವ ಮಳಿಗೆಗಳನ್ನು ಹಾಕಿ ಅಲ್ಲಿ ಮಾಹಿತಿ ನೀಡುವ ಕೆಲಸ ಮಾಡಬೇಕು. ಆರೋಗ್ಯ ಇಲಾಖೆಯಿಂದ ಹೆಲ್ತ್ ಕ್ಯಾಂಪ್ ಹಾಗೂ ತಾತ್ಕಾಲಿಕ ಸಂಚಾರಿ ಕ್ಲಿನಿಕ್ ತೆರೆಯಬೇಕು, ಕುಡಿವ ನೀರು ಆಹಾರದ ಗುಣಮಟ್ಟದ ಕುರಿತು ಗಮನ ಹರಿಸುವಂತೆ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ ಅವರಿಗೆ ಸೂಚಿಸಿದರು.

ಅಬಕಾರಿ ಇಲಾಖೆಯವರು ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಅವಕಾಶ ಕೊಡಬೇಡಿ. ಜನರು ನಶೆಯಲ್ಲಿ ತೇಲಾಡಿಸುವುದನ್ನು ಕಡಿಮೆ ಮಾಡಿ. ಬಾರ್ ಅಂಗಡಿಗಳ ಸಮಯವನ್ನು ಬೆಳಗ್ಗೆ 10 ರಿಂದ ಸಂಜೆ 6ಕ್ಕೆ ಮುಚ್ಚಿಸಲು ಕ್ರಮ ಕೈಗೊಳ್ಳಿ. ತಾಂಡಾಗಳಿಂದ ಕಳ್ಳಬಟ್ಟಿ ಮಾರಾಟ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಬಕಾರಿ ನಿರೀಕ್ಷಕಿ ಜ್ಯೋತಿಬಾಯಿ ಮೇತ್ರಿ ಅವರಿಗೆ ಸೂಚಿಸಿದರು.

ಹೆಸ್ಕಾಂನಿಂದ ನಿರಂತರವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸುರಕ್ಷತೆಯ ದೃಷ್ಟಿಯಿಂದ ಅಗ್ನಿಶಾಮಕ, ಹೆಸ್ಕಾಂನವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೆಸ್ಕಾಂ ಎಇಇ ಆರ್. ಎನ್. ಹಾದಿಮನಿ ಅವರಿಗೆ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಕೃಷಿ, ತೋಟಗಾರಿಕೆ, ಆರೋಗ್ಯ, ಶಿಶು ಅಭಿವೃದ್ಧಿ, ಪೊಲೀಸ್, ಸಾರಿಗೆ ಸೇರಿದಂತೆ ಹಲವು ಇಲಾಖೆಗಳಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಲಾಯಿತು. ಅಲ್ಲದೇ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಬೇಕು ಎಂದು ತಿಳಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಾತ್ರಾ ಕಮೀಟಿ ಮುಖಂಡ ಪ್ರಭುರಾಜ ಕಲ್ಬುರ್ಗಿ, ವಕೀಲರ ಸಂಘದ ಅಧ್ಯಕ್ಷ ಎಸ್. ಎಸ್. ಮಾಲಗತ್ತಿ, ಸತೀಶ ಓಸ್ವಾಲ್, ಗಣ್ಯರಾದ ಬಾಬು ಬಿರಾದಾರ, ಮಾಜಿ ಸೈನಿಕ ರಾಚಯ್ಯ ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ವಾಯ್. ಎಚ್. ವಿಜಯಕರ್, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮತ್ತಿತರರು ಮಾತನಾಡಿದರು. ಸಭೆಯಲ್ಲಿ ಗಣ್ಯ ವರ್ತಕ ಬಿ.ಸಿ.ಮೋಟಗಿ, ತಾಪಂ ಇಒ ನಿಂಗಪ್ಪ ಮಸಳಿ, ವಿವಿಧ ಇಲಾಖೆಯ ಅಧಿಕಾರಿಗಳಾದ ಎಸ್. ಡಿ. ಭಾವಿಕಟ್ಟಿ, ಆರ್. ಎಸ್. ಹಿರೇಗೌಡರ, ಸಂತೋಷ ದೇಶಪಾಂಡೆ ಮೊದಲಾದವರು ಸೇರಿದಂತೆ ಊರಿನ ನಾಗರಿಕರು, ಜಾತ್ರಾ ಕಮೀಟಿ ಪದಾಧಿಕಾರಿಗಳು ಇದ್ದರು. ಸಿ.ಟಿ.ಕಲಾಲ ನಿರೂಪಿಸಿದರು.

ಶಾಸಕ ನಾಡಗೌಡರಿಗೆ ಮಂಡಿನೋವು :
ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ನಾಡಗೌಡರಿಗೆ ಮಂಡಿನೋವು ಕಾಣಿಸಿಕೊಂಡಿತು. ಈ ವೇಳೆ ತಮ್ಮ ಆಪ್ತ ಸಹಾಯಕ ಮಲ್ಲಿಕಾರ್ಜುನ ಬಾಗೇವಾಡಿ ಅವರಿಗೆ ನೋವುನಿವಾರಕ ಔಷಧ ತರುವಂತೆ ತಿಳಿಸಿದ ಅದನ್ನು ಮೊಣಕಾಲಿಗೆ ನಾಡಗೌಡರು ಹೊಡೆದುಕೊಂಡು ಅರ್ಧ ಗಂಟೆಯವರೆಗೆ ಅಧಿಕಾರಿಗಳಿಗೆ, ಕಮೀಟಿಯವರಿಗೆ, ಊರಿನ ನಾಗರಿಕರಿಗೆ ಜಾತ್ರೆ ಯಶಸ್ವಿಗೆ ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ