Officials joined hands for the success of village deity fair: MLA Nad Gowda

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ ಇದ್ದಂತೆ. ಅಧಿಕಾರಿಗಳು ಜಾತ್ರಾ ಕಮೀಟಿಯವರು ತಿಳಿಸುವ ಕೆಲಸಗಳನ್ನು ಲೋಪವಾಗದಂತೆ ಮಾಡಿಕೊಡಬೇಕು ಎಂದು ತಿಳಿಸಿದರು.

ಎಲ್ಲಕ್ಕಿಂತ ಮುಖ್ಯವಾಗಿ ಪಟ್ಟಣದ ಸ್ವಚ್ಛತೆಗೆ ಮುಖ್ಯಾಧಿಕಾರಿಗಳು ತಮ್ಮ ಸಿಬ್ಬಂದಿ ಮೂಲಕ ಗಮನ ಹರಿಸಬೇಕು. ಆಯ್ದ ಜಾಗೆಗಳಲ್ಲಿ ಚರಂಡಿಗಳು ಬ್ಲಾಕ್ ಆಗದಂತೆ ನೋಡಿಕೊಳ್ಳಬೇಕು. ಕುಡಿವ ನೀರು ಪೂರೈಕೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು. ಮೊಬೈಲ್ ಟಾಯ್ಲೆಟ್ ತೆರೆಯಬೇಕು ಎಂದು ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರಿಗೆ ತಿಳಿಸಿದರು.

ಜಾತ್ರೆಗೆ ಸಾವಿರಾರು ಜನ ಆಗಮಿಸುವುದರಿಂದ ಸಂಚಾರದ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಸಾಧ್ಯವಾದರೆ ಜಾತ್ರೆಯಲ್ಲಿ ಒಂದು ತಾತ್ಕಾಲಿಕ ಪೊಲೀಸ್ ಚೌಕಿ ಆರಂಭಿಸಬೇಕು. ಜಾತ್ರೆಯ ಹಿಂದಿನ ದಿನದಿಂದ ಜಾತ್ರೆ ಮುಗಿಯವರೆಗೂ ಏಕಮುಖ ಸಂಚಾರ ಮುಖ್ಯರಸ್ತೆಯಲ್ಲಿ ಕೈಗೊಳ್ಳಬೇಕು. ಬಸವೇಶ್ವರ ವೃತ್ತ ಹಾಗೂ ಇಂದಿರಾ ವೃತ್ತದಲ್ಲಿ ಬ್ಯಾರಿಕೇಡ್ ಹಾಕಿ ಭಾರಿ ಪ್ರಮಾಣದ ವಾಹನಗಳ ಸಂಚಾರ ನಿಷೇಧಿಸಬೇಕು ಎಂದು ಸಿಪಿಐ ಮೊಹ್ಮದ ಫಸೀವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ ಅವರಿಗೆ ಸೂಚಿಸಿದರು.

ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯನ್ನು ಒದಗಿಸುವ ಮಳಿಗೆಗಳನ್ನು ಹಾಕಿ ಅಲ್ಲಿ ಮಾಹಿತಿ ನೀಡುವ ಕೆಲಸ ಮಾಡಬೇಕು. ಆರೋಗ್ಯ ಇಲಾಖೆಯಿಂದ ಹೆಲ್ತ್ ಕ್ಯಾಂಪ್ ಹಾಗೂ ತಾತ್ಕಾಲಿಕ ಸಂಚಾರಿ ಕ್ಲಿನಿಕ್ ತೆರೆಯಬೇಕು, ಕುಡಿವ ನೀರು ಆಹಾರದ ಗುಣಮಟ್ಟದ ಕುರಿತು ಗಮನ ಹರಿಸುವಂತೆ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ ಅವರಿಗೆ ಸೂಚಿಸಿದರು.

ಅಬಕಾರಿ ಇಲಾಖೆಯವರು ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಅವಕಾಶ ಕೊಡಬೇಡಿ. ಜನರು ನಶೆಯಲ್ಲಿ ತೇಲಾಡಿಸುವುದನ್ನು ಕಡಿಮೆ ಮಾಡಿ. ಬಾರ್ ಅಂಗಡಿಗಳ ಸಮಯವನ್ನು ಬೆಳಗ್ಗೆ 10 ರಿಂದ ಸಂಜೆ 6ಕ್ಕೆ ಮುಚ್ಚಿಸಲು ಕ್ರಮ ಕೈಗೊಳ್ಳಿ. ತಾಂಡಾಗಳಿಂದ ಕಳ್ಳಬಟ್ಟಿ ಮಾರಾಟ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಬಕಾರಿ ನಿರೀಕ್ಷಕಿ ಜ್ಯೋತಿಬಾಯಿ ಮೇತ್ರಿ ಅವರಿಗೆ ಸೂಚಿಸಿದರು.

ಹೆಸ್ಕಾಂನಿಂದ ನಿರಂತರವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸುರಕ್ಷತೆಯ ದೃಷ್ಟಿಯಿಂದ ಅಗ್ನಿಶಾಮಕ, ಹೆಸ್ಕಾಂನವರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೆಸ್ಕಾಂ ಎಇಇ ಆರ್. ಎನ್. ಹಾದಿಮನಿ ಅವರಿಗೆ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಕೃಷಿ, ತೋಟಗಾರಿಕೆ, ಆರೋಗ್ಯ, ಶಿಶು ಅಭಿವೃದ್ಧಿ, ಪೊಲೀಸ್, ಸಾರಿಗೆ ಸೇರಿದಂತೆ ಹಲವು ಇಲಾಖೆಗಳಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಲಾಯಿತು. ಅಲ್ಲದೇ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈಜೋಡಿಸಬೇಕು ಎಂದು ತಿಳಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಾತ್ರಾ ಕಮೀಟಿ ಮುಖಂಡ ಪ್ರಭುರಾಜ ಕಲ್ಬುರ್ಗಿ, ವಕೀಲರ ಸಂಘದ ಅಧ್ಯಕ್ಷ ಎಸ್. ಎಸ್. ಮಾಲಗತ್ತಿ, ಸತೀಶ ಓಸ್ವಾಲ್, ಗಣ್ಯರಾದ ಬಾಬು ಬಿರಾದಾರ, ಮಾಜಿ ಸೈನಿಕ ರಾಚಯ್ಯ ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ವಾಯ್. ಎಚ್. ವಿಜಯಕರ್, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮತ್ತಿತರರು ಮಾತನಾಡಿದರು. ಸಭೆಯಲ್ಲಿ ಗಣ್ಯ ವರ್ತಕ ಬಿ.ಸಿ.ಮೋಟಗಿ, ತಾಪಂ ಇಒ ನಿಂಗಪ್ಪ ಮಸಳಿ, ವಿವಿಧ ಇಲಾಖೆಯ ಅಧಿಕಾರಿಗಳಾದ ಎಸ್. ಡಿ. ಭಾವಿಕಟ್ಟಿ, ಆರ್. ಎಸ್. ಹಿರೇಗೌಡರ, ಸಂತೋಷ ದೇಶಪಾಂಡೆ ಮೊದಲಾದವರು ಸೇರಿದಂತೆ ಊರಿನ ನಾಗರಿಕರು, ಜಾತ್ರಾ ಕಮೀಟಿ ಪದಾಧಿಕಾರಿಗಳು ಇದ್ದರು. ಸಿ.ಟಿ.ಕಲಾಲ ನಿರೂಪಿಸಿದರು.

ಶಾಸಕ ನಾಡಗೌಡರಿಗೆ ಮಂಡಿನೋವು :
ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕ ನಾಡಗೌಡರಿಗೆ ಮಂಡಿನೋವು ಕಾಣಿಸಿಕೊಂಡಿತು. ಈ ವೇಳೆ ತಮ್ಮ ಆಪ್ತ ಸಹಾಯಕ ಮಲ್ಲಿಕಾರ್ಜುನ ಬಾಗೇವಾಡಿ ಅವರಿಗೆ ನೋವುನಿವಾರಕ ಔಷಧ ತರುವಂತೆ ತಿಳಿಸಿದ ಅದನ್ನು ಮೊಣಕಾಲಿಗೆ ನಾಡಗೌಡರು ಹೊಡೆದುಕೊಂಡು ಅರ್ಧ ಗಂಟೆಯವರೆಗೆ ಅಧಿಕಾರಿಗಳಿಗೆ, ಕಮೀಟಿಯವರಿಗೆ, ಊರಿನ ನಾಗರಿಕರಿಗೆ ಜಾತ್ರೆ ಯಶಸ್ವಿಗೆ ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್