ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್. ಬಿ. ಬಳ್ಳಾರಿ ಸರಕಾರಿ ನೌಕರರಿಗೆ ಕರೆ ನೀಡಿದರು.

ಪಟ್ಟಣದ ರುದ್ರಗೌಡ ಪಾಟೀಲ ಸರಕಾರಿ ಪಥಮ ದರ್ಜೇ ಕಾಲೇಜು ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಯೊಬ್ಬ ನೌಕರರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು. ನೌಕರರ ಸಂಘ 22 ಕೋಟಿ ಹಣವನ್ನು ಎಪ್.ಡಿ. ಮಾಡಿದ್ದು, ಕ್ರೀಡಾಕೂಟ ಹಾಗೂ ಮಹಿಳಾದಿನಾಚರಣೆ ಸೇರಿದಂತೆ ವಿವಿಧ ಸಾಂಸ್ಕತೀಕ ಕಾರ್ಯಕ್ರಮಗಳಿಗೆ ಸರಕಾರ ಅನುದಾನ ನೀಡುತ್ತಿದ್ದು, ನಮ್ಮ ಬಾಗಲಕೋಟೆ ಜಿಲ್ಲೆಗೆ 2 ಕೋಟಿ ಅನುದಾನ ಬಂದಿದ್ದು ಬೀಳಗಿ ಸರಕಾರಿ ನೌಕರರ ಭವನ ನವೀಕರಣಗೊಳಿಸಲು 25 ಲಕ್ಷ ರೂಪಾಯಿಗಳ ಅನುಧಾನ ನೀಡಲಾಗುವದು ಎಂದು ಎಮ್ ಬಿ ಬಳ್ಲಾರಿ ಹೇಳಿದರು.

ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಯುವ ಅನ್ನದಾತ ರೈತನು ಕೃಷಿ ಮಾಡಿ ವರ್ಷಕ್ಕೆ ಲಕ್ಷಾಂತರ ರೂಗಳು ಆದಾಯ ಗಳಿಸಿದರೂ ಆತನಿಗೆ ಕನ್ಯೆ ಕೊಡುತ್ತಿಲ್ಲ, ಇಂದಿನ ದಿನಮಾನದಲ್ಲಿ ಕಡಿಮೆ ಸಂಬಳದ ನೌಕರಿ ಇದ್ದರೂ ಅವರನ್ನು ಈಗಿನ ಕನ್ಯೆಯರು ಮದುವೆಯಾಗಲು ಮಂದೆ ಬರುತ್ತಾರೆ ಎಂದ ಅವರು ಸರಕಾರಿ ನೌಕರಿ ಮಾಡುವರು ಅದೃಷ್ಟವಂತರು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ನೂತನ ಪದಾಧಿಕಾಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ತಹಶೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಭಯಕುಮಾರ ಮೊರಭ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೆಂದ್ರ ಧನಪಾಲ, ಸಿ.ಪಿ.ಆಯ್ ಬಸವರಾಜ ಹಳಬನ್ನವರವರನ್ನು ಮುಖ್ಯ ಅತಿಥಿಗಳಾಗಿ ಅಹ್ವಾನ ನೀಡಿದರೂ ತಾವು ರಾಜ್ಯ ಸರಕಾರಿ ನೌಕರಾಗಿದ್ದರು ಕಾರ್ಯಕ್ರಮಕ್ಕೆ ಗೈರು ಹಾಜರಿಯಾಗಿದ್ದು ಎದ್ದು ಕಾಣತಿತ್ತು. ರಾಜ್ಯ ಸರಕಾರಿ ನೌಕರರ ಸಂಘದಲ್ಲಿ ಎರಡು ಬಣಗಳಾಗಿದ್ದು ಅದರ ಪರಿಣಾಮದ ಸಲುವಾಗಿ ಕಾರ್ಯಕ್ರಮದಿಂದ ದೂರ ಉಳಿದಿದ್ದರಬಹುದು ಎಂದು ನಿವೃತ್ತ ನೌಕರರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಡಿ.ವಾಯ್ ಅಂಬಿಗೇರ ಕಾರ್ಯದರ್ಶಿ ಮಹೇಶ ಜಗಲಿ, ಖಜಾಂಚಿ ದಾನಪ್ಪ ತಳವಾರ, ಪದಾಧಿಕಾರಿಗಳಾದ ಸಿದ್ದು ನಕ್ಕರಗುಂದಿ, ಎಸ್.ಎಸ್. ನಾರಾಯಣಿ, ಎಸ್.ಬಿ. ಮುಂಡರಗಿ, ಅಪ್ಪಾಸಾಹೇಬ ಮೋದಿ, ಎಲ್.ಡಿ. ಹಳ್ಳಿ, ಬಸವರಾಜ ನಿರಾಕರಿ ಜಿ.ಕೆ. ಸುಳ್ಳದ, ಅನಿಲ ಹೂಗಾರ,‌ಸುಜಾತಾ ರಜಪೂತ, ಆರ್. ಕೆ. ರಾಠೋಡ ಬಸವರಾಜ ಡಾವಣಗೇರಿ ಸೇರಿದಂತೆ ವೃಂದ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥೀತರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು