ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್. ಬಿ. ಬಳ್ಳಾರಿ ಸರಕಾರಿ ನೌಕರರಿಗೆ ಕರೆ ನೀಡಿದರು.

ಪಟ್ಟಣದ ರುದ್ರಗೌಡ ಪಾಟೀಲ ಸರಕಾರಿ ಪಥಮ ದರ್ಜೇ ಕಾಲೇಜು ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಯೊಬ್ಬ ನೌಕರರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು. ನೌಕರರ ಸಂಘ 22 ಕೋಟಿ ಹಣವನ್ನು ಎಪ್.ಡಿ. ಮಾಡಿದ್ದು, ಕ್ರೀಡಾಕೂಟ ಹಾಗೂ ಮಹಿಳಾದಿನಾಚರಣೆ ಸೇರಿದಂತೆ ವಿವಿಧ ಸಾಂಸ್ಕತೀಕ ಕಾರ್ಯಕ್ರಮಗಳಿಗೆ ಸರಕಾರ ಅನುದಾನ ನೀಡುತ್ತಿದ್ದು, ನಮ್ಮ ಬಾಗಲಕೋಟೆ ಜಿಲ್ಲೆಗೆ 2 ಕೋಟಿ ಅನುದಾನ ಬಂದಿದ್ದು ಬೀಳಗಿ ಸರಕಾರಿ ನೌಕರರ ಭವನ ನವೀಕರಣಗೊಳಿಸಲು 25 ಲಕ್ಷ ರೂಪಾಯಿಗಳ ಅನುಧಾನ ನೀಡಲಾಗುವದು ಎಂದು ಎಮ್ ಬಿ ಬಳ್ಲಾರಿ ಹೇಳಿದರು.

ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಯುವ ಅನ್ನದಾತ ರೈತನು ಕೃಷಿ ಮಾಡಿ ವರ್ಷಕ್ಕೆ ಲಕ್ಷಾಂತರ ರೂಗಳು ಆದಾಯ ಗಳಿಸಿದರೂ ಆತನಿಗೆ ಕನ್ಯೆ ಕೊಡುತ್ತಿಲ್ಲ, ಇಂದಿನ ದಿನಮಾನದಲ್ಲಿ ಕಡಿಮೆ ಸಂಬಳದ ನೌಕರಿ ಇದ್ದರೂ ಅವರನ್ನು ಈಗಿನ ಕನ್ಯೆಯರು ಮದುವೆಯಾಗಲು ಮಂದೆ ಬರುತ್ತಾರೆ ಎಂದ ಅವರು ಸರಕಾರಿ ನೌಕರಿ ಮಾಡುವರು ಅದೃಷ್ಟವಂತರು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ನೂತನ ಪದಾಧಿಕಾಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ತಹಶೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಭಯಕುಮಾರ ಮೊರಭ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೆಂದ್ರ ಧನಪಾಲ, ಸಿ.ಪಿ.ಆಯ್ ಬಸವರಾಜ ಹಳಬನ್ನವರವರನ್ನು ಮುಖ್ಯ ಅತಿಥಿಗಳಾಗಿ ಅಹ್ವಾನ ನೀಡಿದರೂ ತಾವು ರಾಜ್ಯ ಸರಕಾರಿ ನೌಕರಾಗಿದ್ದರು ಕಾರ್ಯಕ್ರಮಕ್ಕೆ ಗೈರು ಹಾಜರಿಯಾಗಿದ್ದು ಎದ್ದು ಕಾಣತಿತ್ತು. ರಾಜ್ಯ ಸರಕಾರಿ ನೌಕರರ ಸಂಘದಲ್ಲಿ ಎರಡು ಬಣಗಳಾಗಿದ್ದು ಅದರ ಪರಿಣಾಮದ ಸಲುವಾಗಿ ಕಾರ್ಯಕ್ರಮದಿಂದ ದೂರ ಉಳಿದಿದ್ದರಬಹುದು ಎಂದು ನಿವೃತ್ತ ನೌಕರರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಡಿ.ವಾಯ್ ಅಂಬಿಗೇರ ಕಾರ್ಯದರ್ಶಿ ಮಹೇಶ ಜಗಲಿ, ಖಜಾಂಚಿ ದಾನಪ್ಪ ತಳವಾರ, ಪದಾಧಿಕಾರಿಗಳಾದ ಸಿದ್ದು ನಕ್ಕರಗುಂದಿ, ಎಸ್.ಎಸ್. ನಾರಾಯಣಿ, ಎಸ್.ಬಿ. ಮುಂಡರಗಿ, ಅಪ್ಪಾಸಾಹೇಬ ಮೋದಿ, ಎಲ್.ಡಿ. ಹಳ್ಳಿ, ಬಸವರಾಜ ನಿರಾಕರಿ ಜಿ.ಕೆ. ಸುಳ್ಳದ, ಅನಿಲ ಹೂಗಾರ,‌ಸುಜಾತಾ ರಜಪೂತ, ಆರ್. ಕೆ. ರಾಠೋಡ ಬಸವರಾಜ ಡಾವಣಗೇರಿ ಸೇರಿದಂತೆ ವೃಂದ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥೀತರಿದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600