ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್. ಬಿ. ಬಳ್ಳಾರಿ ಸರಕಾರಿ ನೌಕರರಿಗೆ ಕರೆ ನೀಡಿದರು.

ಪಟ್ಟಣದ ರುದ್ರಗೌಡ ಪಾಟೀಲ ಸರಕಾರಿ ಪಥಮ ದರ್ಜೇ ಕಾಲೇಜು ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಯೊಬ್ಬ ನೌಕರರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು. ನೌಕರರ ಸಂಘ 22 ಕೋಟಿ ಹಣವನ್ನು ಎಪ್.ಡಿ. ಮಾಡಿದ್ದು, ಕ್ರೀಡಾಕೂಟ ಹಾಗೂ ಮಹಿಳಾದಿನಾಚರಣೆ ಸೇರಿದಂತೆ ವಿವಿಧ ಸಾಂಸ್ಕತೀಕ ಕಾರ್ಯಕ್ರಮಗಳಿಗೆ ಸರಕಾರ ಅನುದಾನ ನೀಡುತ್ತಿದ್ದು, ನಮ್ಮ ಬಾಗಲಕೋಟೆ ಜಿಲ್ಲೆಗೆ 2 ಕೋಟಿ ಅನುದಾನ ಬಂದಿದ್ದು ಬೀಳಗಿ ಸರಕಾರಿ ನೌಕರರ ಭವನ ನವೀಕರಣಗೊಳಿಸಲು 25 ಲಕ್ಷ ರೂಪಾಯಿಗಳ ಅನುಧಾನ ನೀಡಲಾಗುವದು ಎಂದು ಎಮ್ ಬಿ ಬಳ್ಲಾರಿ ಹೇಳಿದರು.

ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಯುವ ಅನ್ನದಾತ ರೈತನು ಕೃಷಿ ಮಾಡಿ ವರ್ಷಕ್ಕೆ ಲಕ್ಷಾಂತರ ರೂಗಳು ಆದಾಯ ಗಳಿಸಿದರೂ ಆತನಿಗೆ ಕನ್ಯೆ ಕೊಡುತ್ತಿಲ್ಲ, ಇಂದಿನ ದಿನಮಾನದಲ್ಲಿ ಕಡಿಮೆ ಸಂಬಳದ ನೌಕರಿ ಇದ್ದರೂ ಅವರನ್ನು ಈಗಿನ ಕನ್ಯೆಯರು ಮದುವೆಯಾಗಲು ಮಂದೆ ಬರುತ್ತಾರೆ ಎಂದ ಅವರು ಸರಕಾರಿ ನೌಕರಿ ಮಾಡುವರು ಅದೃಷ್ಟವಂತರು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ನೂತನ ಪದಾಧಿಕಾಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ತಹಶೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಭಯಕುಮಾರ ಮೊರಭ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೆಂದ್ರ ಧನಪಾಲ, ಸಿ.ಪಿ.ಆಯ್ ಬಸವರಾಜ ಹಳಬನ್ನವರವರನ್ನು ಮುಖ್ಯ ಅತಿಥಿಗಳಾಗಿ ಅಹ್ವಾನ ನೀಡಿದರೂ ತಾವು ರಾಜ್ಯ ಸರಕಾರಿ ನೌಕರಾಗಿದ್ದರು ಕಾರ್ಯಕ್ರಮಕ್ಕೆ ಗೈರು ಹಾಜರಿಯಾಗಿದ್ದು ಎದ್ದು ಕಾಣತಿತ್ತು. ರಾಜ್ಯ ಸರಕಾರಿ ನೌಕರರ ಸಂಘದಲ್ಲಿ ಎರಡು ಬಣಗಳಾಗಿದ್ದು ಅದರ ಪರಿಣಾಮದ ಸಲುವಾಗಿ ಕಾರ್ಯಕ್ರಮದಿಂದ ದೂರ ಉಳಿದಿದ್ದರಬಹುದು ಎಂದು ನಿವೃತ್ತ ನೌಕರರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಡಿ.ವಾಯ್ ಅಂಬಿಗೇರ ಕಾರ್ಯದರ್ಶಿ ಮಹೇಶ ಜಗಲಿ, ಖಜಾಂಚಿ ದಾನಪ್ಪ ತಳವಾರ, ಪದಾಧಿಕಾರಿಗಳಾದ ಸಿದ್ದು ನಕ್ಕರಗುಂದಿ, ಎಸ್.ಎಸ್. ನಾರಾಯಣಿ, ಎಸ್.ಬಿ. ಮುಂಡರಗಿ, ಅಪ್ಪಾಸಾಹೇಬ ಮೋದಿ, ಎಲ್.ಡಿ. ಹಳ್ಳಿ, ಬಸವರಾಜ ನಿರಾಕರಿ ಜಿ.ಕೆ. ಸುಳ್ಳದ, ಅನಿಲ ಹೂಗಾರ,‌ಸುಜಾತಾ ರಜಪೂತ, ಆರ್. ಕೆ. ರಾಠೋಡ ಬಸವರಾಜ ಡಾವಣಗೇರಿ ಸೇರಿದಂತೆ ವೃಂದ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥೀತರಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ