ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್. ಬಿ. ಬಳ್ಳಾರಿ ಸರಕಾರಿ ನೌಕರರಿಗೆ ಕರೆ ನೀಡಿದರು.

ಪಟ್ಟಣದ ರುದ್ರಗೌಡ ಪಾಟೀಲ ಸರಕಾರಿ ಪಥಮ ದರ್ಜೇ ಕಾಲೇಜು ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಪ್ರತಿಯೊಬ್ಬ ನೌಕರರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು. ನೌಕರರ ಸಂಘ 22 ಕೋಟಿ ಹಣವನ್ನು ಎಪ್.ಡಿ. ಮಾಡಿದ್ದು, ಕ್ರೀಡಾಕೂಟ ಹಾಗೂ ಮಹಿಳಾದಿನಾಚರಣೆ ಸೇರಿದಂತೆ ವಿವಿಧ ಸಾಂಸ್ಕತೀಕ ಕಾರ್ಯಕ್ರಮಗಳಿಗೆ ಸರಕಾರ ಅನುದಾನ ನೀಡುತ್ತಿದ್ದು, ನಮ್ಮ ಬಾಗಲಕೋಟೆ ಜಿಲ್ಲೆಗೆ 2 ಕೋಟಿ ಅನುದಾನ ಬಂದಿದ್ದು ಬೀಳಗಿ ಸರಕಾರಿ ನೌಕರರ ಭವನ ನವೀಕರಣಗೊಳಿಸಲು 25 ಲಕ್ಷ ರೂಪಾಯಿಗಳ ಅನುಧಾನ ನೀಡಲಾಗುವದು ಎಂದು ಎಮ್ ಬಿ ಬಳ್ಲಾರಿ ಹೇಳಿದರು.

ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಯುವ ಅನ್ನದಾತ ರೈತನು ಕೃಷಿ ಮಾಡಿ ವರ್ಷಕ್ಕೆ ಲಕ್ಷಾಂತರ ರೂಗಳು ಆದಾಯ ಗಳಿಸಿದರೂ ಆತನಿಗೆ ಕನ್ಯೆ ಕೊಡುತ್ತಿಲ್ಲ, ಇಂದಿನ ದಿನಮಾನದಲ್ಲಿ ಕಡಿಮೆ ಸಂಬಳದ ನೌಕರಿ ಇದ್ದರೂ ಅವರನ್ನು ಈಗಿನ ಕನ್ಯೆಯರು ಮದುವೆಯಾಗಲು ಮಂದೆ ಬರುತ್ತಾರೆ ಎಂದ ಅವರು ಸರಕಾರಿ ನೌಕರಿ ಮಾಡುವರು ಅದೃಷ್ಟವಂತರು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ನೂತನ ಪದಾಧಿಕಾಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ತಹಶೀಲ್ದಾರ್ ವಿನೋದ ಹತ್ತಳ್ಳಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಭಯಕುಮಾರ ಮೊರಭ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೆಂದ್ರ ಧನಪಾಲ, ಸಿ.ಪಿ.ಆಯ್ ಬಸವರಾಜ ಹಳಬನ್ನವರವರನ್ನು ಮುಖ್ಯ ಅತಿಥಿಗಳಾಗಿ ಅಹ್ವಾನ ನೀಡಿದರೂ ತಾವು ರಾಜ್ಯ ಸರಕಾರಿ ನೌಕರಾಗಿದ್ದರು ಕಾರ್ಯಕ್ರಮಕ್ಕೆ ಗೈರು ಹಾಜರಿಯಾಗಿದ್ದು ಎದ್ದು ಕಾಣತಿತ್ತು. ರಾಜ್ಯ ಸರಕಾರಿ ನೌಕರರ ಸಂಘದಲ್ಲಿ ಎರಡು ಬಣಗಳಾಗಿದ್ದು ಅದರ ಪರಿಣಾಮದ ಸಲುವಾಗಿ ಕಾರ್ಯಕ್ರಮದಿಂದ ದೂರ ಉಳಿದಿದ್ದರಬಹುದು ಎಂದು ನಿವೃತ್ತ ನೌಕರರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಡಿ.ವಾಯ್ ಅಂಬಿಗೇರ ಕಾರ್ಯದರ್ಶಿ ಮಹೇಶ ಜಗಲಿ, ಖಜಾಂಚಿ ದಾನಪ್ಪ ತಳವಾರ, ಪದಾಧಿಕಾರಿಗಳಾದ ಸಿದ್ದು ನಕ್ಕರಗುಂದಿ, ಎಸ್.ಎಸ್. ನಾರಾಯಣಿ, ಎಸ್.ಬಿ. ಮುಂಡರಗಿ, ಅಪ್ಪಾಸಾಹೇಬ ಮೋದಿ, ಎಲ್.ಡಿ. ಹಳ್ಳಿ, ಬಸವರಾಜ ನಿರಾಕರಿ ಜಿ.ಕೆ. ಸುಳ್ಳದ, ಅನಿಲ ಹೂಗಾರ,‌ಸುಜಾತಾ ರಜಪೂತ, ಆರ್. ಕೆ. ರಾಠೋಡ ಬಸವರಾಜ ಡಾವಣಗೇರಿ ಸೇರಿದಂತೆ ವೃಂದ ನೌಕರರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥೀತರಿದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.