Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಈ ಯುದ್ಧ ನಡೆಯಬೇಕಾದ ಅವಶ್ಯಕತೆ ಇರಲಿಲ್ಲ.ಯುದ್ಧ ಕೊನೆಗೊಂಡು ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥನೆ ಮಾಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಉರ್ದು ಶಾಲೆ ಆವರಣದಲ್ಲಿ ಶುಕ್ರವಾರ ದೇವಿಕಾ ಸುಬ್ಬರಾವ್ ಫೌಂಡೇಶನ್‌ದಿAದ ರಂಜಾನ್ ಹಬ್ಬದ ನಿಮಿತ್ಯ ಆಯೋಜನೆ ಮಾಡಿದ್ದ ಇಫ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಮಾನವೀಯ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ ಮಾ.9 ರಂದು ಸಾಯಂಕಾಲ 5ಗಂಟೆಗೆ ಪಟ್ಟಣದ ಮಹಾಂತೇಶ ನಗರದ ಗಣೇಶ ಗುಡಿ ಹತ್ತಿರದಲ್ಲಿರುವ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಶಾಲೆಯ ಗೌರವಾಧ್ಯಕ್ಷ ವೇ.ಸಂಗಯ್ಯ ಹಾಲಗಂಗಾಧರಮಠ ವಹಿಸುವರು.ವೈದ್ಯರಾದ ಡಾ.ಚಂದ್ರಶೇಖರ ಶಿವಯೋಗಿಮಠ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಹುಲ್ಲೂರ ಎಸ್.ಎನ್.ಡಿ ನ್ಯಾಶನಲ್