Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ