Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು