Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ