Murder Case Image of murder symbol

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

Murder: ಆಸ್ತಿ ವಿವಾದದ ಜಗಳ ವೃದ್ಧನ ಕೊಲೆಯಲ್ಲಿ ಅಂತ್ಯ..!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೋಟಿ ಗ್ರಾಮದ ರೈತರ ಜಮೀನಿನಲ್ಲಿ ಅಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧನನ್ನು ಬುಧವಾರ ಕೊಲೆ (Murder) ಮಾಡಲಾಗಿದೆ.

ಹೊಸಕೋಟೆ ಗ್ರಾಮದ ಪ್ರತಿಷ್ಠಿತ ಕುಟುಂಬದ ಹಿರಿಯ ಬಸನಗೌಡ ಪಾಟೀಲ(75)ಕೊಲೆ ಆಗಿರುವ ವೃದ್ಧ. ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ವಾಲಿಕಾರ, ಲಕ್ಷ್ಮಣ ವಾಲಿಕಾರ ಹಾಗೂ ಬಾಳಪ್ಪ ವಾಲಿಕಾರ ಎನ್ನುವ ಬಸನಗೌಡ ಪಾಟೀಲ ಮೂವರು ಸಹೋದರರನ್ನು ಕೆರೂರ ಪೊಲೀಸರು ಬಂಧಿಸಿದ್ದಾರೆ.

ಏನಿದು ಆಸ್ತಿ ವಿವಾದ?

ಮೃತ ಬಸನಗೌಡ ಪಾಟೀಲ ಅವರ ಹಿರಿಯರಿಂದ ಬಂಧಿತ ಆರೋಪಿಗಳ ಹಿರಿಯರು 1977ರಲ್ಲಿ 14 ಎಕರೆ ಜಮೀನು ಖರೀದಿ ಮಾಡಿದ್ದರಂತೆ. ಮಾಲೀಕತ್ವ ಮಾತ್ರ ಖರೀದಿ ಮಾಡಿದವರ ಹೆಸರಿಗೆ ವರ್ಗಾವಣೆ ಆಗಿರಲಿಲ್ಲ. ಆರ್‌ಟಿಸಿಯಲ್ಲಿ ಕೊಲೆಯಾಗಿರುವ ಬಸನಗೌಡ ಅವರ ಸಹೋದರಿ ಹೆಸರು ಇದೆ. ಅವರು ವಿದೇಶದಲ್ಲಿ ಇದ್ದು, ಬಹಳ ದಿನಗಳಿಂದ ಇಲ್ಲಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಆದರೆ, ಜಮೀನಿನಲ್ಲಿ ಕೊಲೆ ಆರೋಪಿಗಳು ಸಾಗುವಳಿ ಮಾಡುತ್ತ ಬಂದಿದ್ದರು. ಹತ್ತಿರದಲ್ಲಿ ಬಸನಗೌಡ ಪಾಟೀಲ ಅವರಿಗೆ ಸೇರಿದ ಜಮೀನು ಇದೆ. ತಮ್ಮ ಹಿರಿಯರು ಖರೀದಿ ಮಾಡಿರುವ ಜಮೀನು ಮಾಲೀಕತ್ವ ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಅವರನ್ನು ಕೇಳುತ್ತಿದ್ದರು. ಸಹೋದರಿ ವಿದೇಶದಿಂದ ಬಂದ ಮೇಲೆ ಮಾಡಿಸಿಕೊಡುವುದಾಗಿ ಹೇಳುತ್ತಲೇ ಬಂದಿದ್ದರು. ಅದು ಈವರೆಗೂ ಆಗಿರಲಿಲ್ಲ.

ಸೋಮವಾರ ಮೂವರು ಸಹೋದರರು ಹೊಲದಲ್ಲಿ ಇದ್ದಾಗ ಅವರ ಪಕ್ಕದ ಜಮೀನಿಗೆ ಬಸನಗೌಡ ಪಾಟೀಲ ಬಂದಿದ್ದಾರೆ. ಅವರನ್ನು ನೋಡಿ, ಜಮೀನು ತಮ್ಮ ಹೆಸರಿಗೆ ಯಾವಾಗ ಮಾಡಿಸಿಕೊಡುತ್ತೀರಿ. ಬರೀ ಹೇಳುವುದೇ ಆಯಿತು ಎಂದಿದ್ದಾರೆ. ಆಗ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಅದು ಕೊನೆಗೆ ವಿಕೋಪಕ್ಕೆ ತಿರುಗಿ ಮೂವರು ಸಹೋದರರು ಸೇರಿ ವೃದ್ಧನಿಗೆ ಕಬ್ಬಿನ ಗಣಕಿ ಹಾಗೂ ಕಲ್ಲುಗಳಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಧಿತ ಆರೋಪಿಗಳು ಕಾಡರಕೊಪ್ಪ ಗ್ರಾಮದವರಾಗಿವು ಬಸನಗೌಡ ಅವರು ಹೊಸಕೋಟೆ ಗ್ರಾಮದವರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?

ಹೊಸಕೋಟೆ ವ್ಯಾಪ್ತಿಯ ಜಮೀನಿನಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 1977ರಲ್ಲಿ ನಡೆದಿದ್ದ ಜಮೀನು ಖರೀದಿ ಬಳಿಕ ಮಾಲೀಕತ್ವ ಈ ವರೆಗೂ ಬದಲಾಗಿರಲಿಲ್ಲ. ಅದನ್ನು ತಮ್ಮ ಹೆಸರಿಗೆ ಮಾಡಿಸುವಂತೆ ಆಗಾಗ ಹೇಳಿದ್ದು, ಬುಧವಾರ ಇದೇ ವಿಚಾರವಾಗಿ ಜಗಳ ನಡೆದು ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹೇಳಿದ್ದಾರೆ.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ